ನಿತ್ಯ ನಿಮ್ಮ ಬಿಸಿ ಸುದ್ದಿಯಲ್ಲಿ 12 ನೇ ಶತಮಾನದಲ್ಲಿ ಶರಣರು ರಚಿಸಿದ ವಚನಗಳನ್ನು ನಿಮ್ಮಗಳ ಅವಗಾಹನೆಗೆ
ವಚನ:
ಕೀಳು ಲೋಹದ ಮೇಲೆ ಮೇಲು ಚಿನ್ನವ ತೊಡೆದಡೆ,
ಅದು ಸ್ವಯಂಭು ಹೇಮವಪ್ಪುದೆ?
ಹೆಣ್ಣು ಹೊನ್ನು ಮಣ್ಣು ಕುರಿತು
ಕುಜಾತಿಗನ್ನಕ್ಕೆ ಶೀಲವಂತನಾದವ
ನನ್ನಿಯ ವ್ರತದ ದೆಸೆಯ ಬಲ್ಲನೆ?
ಇಂತೀ ಗನ್ನರನರಿದು, ಇಂತೀ ನಿಜಪ್ರಸನ್ನರ ಕಂಡು,
ಉಭಯದ ಬಿನ್ನಾಣದ ವ್ರತದ ಬೆಸುಗೆಯ
ತ್ರಿಕರಣಕ್ಕೆ ಅನ್ಯವಿಲ್ಲದೆ ಮಾಡಬೇಕು.ಏಲೇಶ್ವರಲಿಂಗಕ್ಕೆ ವ್ರತಕ್ಕೆ ಆಚಾರ್ಯನಾಗಬಲ್ಲಡೆ.
-ಏಲೇಶ್ವರ ಕೇತಯ್ಯ

































