ಚಿತ್ರದುರ್ಗ: ಮಕ್ಕಳಿಗೆ ಪಠ್ಯ ಎಷ್ಟು ಮುಖ್ಯವೋ ಅಷ್ಟೇ ಪ್ರಮಾಣದಲ್ಲಿ ಪಠ್ಯೇತರ ಚಟುವಟಿಕೆಗಳು ಅಗತ್ಯವಾಗಿದೆ ಇದನ್ನು ಮಾಡಿಸುವಲ್ಲಿ ದೈಹಿಕ ಶಿಕ್ಷಕನ ಪಾತ್ರ ಅತಿ ಮುಖ್ಯವಾಗಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೆಶಕರಾದ ಮಂಜುನಾಥ್ ತಿಳಿಸಿದರು.
ಚಿತ್ರದುರ್ಗ ನಗರದ ಎಸ್.ಆರ್.ಬಿ.ಎಂ.ಎಸ್, ರೋಟರಿ ಬಾಲಭವನದಲ್ಲಿ ಶುಕ್ರವಾರ ಸಂಜೆ ಹಮ್ಮಿಕೊಂಡಿದ್ದ ಕರ್ನಾಟಕ ರಾಜ್ಯ ಗ್ರೇಡ್-1 ದೈಹಿಕ ಶಿಕ್ಷಣ ಶಿಕ್ಷಕರ ಜಿಲ್ಲಾ ಹಾಗೂ ತಾಲ್ಲೂಕು ಚುನಾಯಿತ ಪದಾಧಿಕಾರಿಗಳ ಪದಗ್ರಹಣ ಸಮಾರಂಭವನ್ನು ಉದ್ಘಾಟಿಸಿ ಚುನಾವಣೆಯಲ್ಲಿ ವಿಜೇತರಾದ ಪದಾಧಿಕಾರಿಗಳಿಗೆ ಪ್ರಮಾಣ ಪತ್ರವನ್ನು ವಿತರಿಸಿ ಮಾತನಾಡಿದ ಅವರು, ಮಕ್ಕಳು ಮಾನಸಿಕವಾಗಿ ಸಧೃಡರಾಗಿದ್ದಾರೆ ಅಷ್ಟೇ ಸಾಲದು ದೈಹಿಕವಾಗಿಯ ಸಹಾ ಬಲವಾಗಿ ಇರಬೇಕಿದೆ ಇದಕ್ಕೆ ಕ್ರೀಡೆ ಸಹಕಾರಿಯಾಗಿದೆ ಇದನ್ನು ಮಾಡಿಸುವ ಕಾರ್ಯವನ್ನು ನಮ್ಮ ದೈಹಿಕ ಶಿಕ್ಷಕರು ಮಾಡುತ್ತಾರೆ. ಒಂದು ಶಾಲೆಯಲ್ಲಿ ಸಾಮಾನ್ಯ ವಿಷಯವನ್ನು ಭೋಧಿಸುವ ಶಿಕ್ಷಕರಷ್ಟೇ ದೈಹಿಕ ಶಿಕ್ಷಕರು ಸಹಾ ಸಮಾನರಾಗಿದ್ದಾರೆ ಎಂದರು.
ಒಂದು ಶಾಲೆಯಲ್ಲಿ ದೈಹಿಕ ಶಿಕ್ಷಕರಿದ್ದರೆ ಅಲ್ಲಿನ ಮಕ್ಕಳಲ್ಲಿ ಶಿಸ್ತು, ಸಂಯಮ, ಶಿಷ್ಠಾಚಾರ ಪಾಲನೆಯಾಗುತ್ತದೆ ಮಕ್ಕಳಲ್ಲಿ ಸಮಯ ಪ್ರಜ್ಞೆ ಮೂಡುತ್ತದೆ, ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ ಬೆಳೆಯುತ್ತದೆ. ನಮ್ಮ ಮಕ್ಕಳನ್ನು ಉತ್ತಮ ಪ್ರಜೆಗಳನ್ನಾಗಿ ಮಾಡುವಲ್ಲಿ ಸಾಮಾನ್ಯ ಶಿಕ್ಷಕರ ಪಾತ್ರದ ಜೊತೆಗೆ ದೈಹಿಕ ಶಿಕ್ಷಕರ ಪಾತ್ರವೂ ಅತಿ ಮುಖ್ಯವಾಗಿದೆ. ಮಕ್ಕಳ ಸರ್ವತೋಮುಖ ಬೆಳವಣಿಗೆಯಲ್ಲಿ ದೈಹಿಕ ಶಿಕ್ಷಕರ ಪಾತ್ರವೂ ಸಹಾ ಮುಖ್ಯವಾಗಿದೆ. ಚಿತ್ರದುರ್ಗದಲ್ಲಿ ನಡೆದ ರಾಜ್ಯ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮದಲ್ಲಿ ದೈಹಿಕ ಶಿಕ್ಷಕರು ಉತ್ತಮವಾದ ಕಾರ್ಯವನ್ನು ಮಾಡಿದ್ದಾರೆ ಬೇರೆ ಕಡೆಯಿಂದ ಬಂದ ಮಕ್ಕಳನ್ನು ಚನ್ನಾಗಿ ನೋಡಿಕೊಂಡಿದ್ದಾರೆ ಅವರು ಕೆಲಸ ಉತ್ತಮವಾಗಿದೆ ಎಂದು ದೈಹಿಕ ಶಿಕ್ಷಕರ ಪಾತ್ರವನ್ನು ಉಪ ನಿರ್ದೆಶಕರು ಪ್ರಂಶಿಸಿದರು.
ಪೌಢಶಾಲಾ ಸಹ ಶಿಕ್ಷಕರು ಸಂಘದ ಅಧ್ಯಕ್ಷರಾದ ಶಿವಣ್ಣ ಮಾತನಾಡಿ, ದೈಹಿಕ ಶಿಕ್ಷಕರ ಸಂಘಕ್ಕೆ ನಮ್ಮ ಸಂಘವೂ ಸಹಾ ಸದಾ ಬೆಂಬಲವನ್ನು ನೀಡಲಿದೆ, ನಿಮ್ಮ ಬೇಡಿಕೆಗಳನ್ನು ಈಡೇರಿಸುವಲ್ಲಿ ನಾವು ಸಹಾ ಕೈಜೋಡಿಸುವುದಾಗಿ ತಿಳಿಸಿ, ಸಂಘ ಉತ್ತಮವಾಗಿದ್ದರೆ ಮಾತ್ರ ನಿಮ್ಮ ಬೇಡಿಕೆಗಳನ್ನು ಈಡೇರಿಸಿಕೊಳ್ಳಲು ಸಾಧ್ಯವಿದೆ, ನಿಮ್ಮಲ್ಲಿ ಒಗ್ಗಟ್ಟನ್ನು ಪ್ರದರ್ಶನ ಮಾಡಿ ಸಂಘ ಸದಾ ಕ್ರಿಯಾಶೀಲವಾಗಿ ಇರುವಂತೆ ನೋಡಿಕೊಳ್ಳಿ ಎಂದು ಕಿವಿ ಮಾತು ಹೇಳಿದರು.
ಮುಖ್ಯೋಪಾಧ್ಯಯರ ಸಂಘದ ಅಧ್ಯಕ್ಷರಾದ ನಾಗೇಂದ್ರಪ್ಪ ಮಾತನಾಡಿ, ದೈಹಿಕ ಶಿಕ್ಷಕರಿಲ್ಲದ ಶಾಲೆ ದೇವರಿಲ್ಲದ ಗುಡಿ ಇದ್ದಂತೆ ಪ್ರತಿಯೊಂದು ಶಾಲೆಯಲ್ಲಿ ದೈಹಿಕ ಶಿಕ್ಷಕರು ಇರಲೇ ಬೇಕಿದೆ ಇವರಿಂದ ಮಾತ್ರ ಮಕ್ಕಳು ದೈಹಿಕವಾಗಿ ಸಮರ್ಥರಾಗಲು ಸಾಧ್ಯವಿದೆ. ಮಕ್ಕಳ ಸರ್ವತೋಮುಖ ಅಭೀವೃದ್ದಿಯಲ್ಲಿ ಇವರ ಪಾತ್ರ ಹೆಚ್ಚಿನ ರೀತಿಯಲ್ಲಿ ಇದೆ. ಮಕ್ಕಳಲ್ಲಿ ಶಿಸ್ತು ಮೂಡಲು ದೈಹಿಕ ಶಿಕ್ಷಕರ ಶ್ರಮ ಹೆಚ್ಚಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಸಹಾಯಕ ಚುನಾವಣಾಧಿಕಾರಿ ಮಹಾಲಿಂಗಪ್ಪ, ಡಿಪಿಇಓ ಚಿದಾನಂದಪ್ಪ, ಟಿಪಿಇಓ ಚನ್ನಬಸಪ್ಪ, ಜಿಲ್ಲಾ ಸಂಘದ ಪ್ರಧಾನ ಕಾರ್ಯದರ್ಶಿ ದಿವಾಕರ, ರಾಜ್ಯ ಪರಿಷತ್ ಸದಸ್ಯರಾದ ರಾಜಪ್ಪ, ಪ್ರಧಾನ ಕಾರ್ಯದರ್ಶಿ ನಾಗೇಂದ್ರಪ್ಪ, ಯೋಗೀಶ್ ಕೊಂಡಾಪುರ, ಶ್ರೀಮತಿ ಲತಾ, ಅಶೋಕ್, ಮೈಲಾರಪ್ಪ, ಕೆಂಚಪ್ಪ, ನಿಕಟ ಪೂರ್ವ ಅಧ್ಯಕ್ಷರಾದ ಮಂಜುನಾಥ್, ಭಾಗವಹಿಸಿದ್ದರು.
ವಿಜಯಪ್ರಸಾದ್ ಪ್ರಾರ್ಥಿಸಿದರೆ. ಚನ್ನಬಸಪ್ಪ ಸ್ವಾಗತಿಸಿದರು, ಸಂಘಟನಾ ಕಾರ್ಯದರ್ಶಿ ಪಾಂಡುರಂಗಪ್ಪ ಪ್ರಸ್ತಾವಿಕವಾಗಿ ಮಾತನಾಡಿದರೆ. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕಲ್ಲೇಶ್ ಕಾರ್ಯಕ್ರಮ ನಿರೂಪಿಸಿದರು.