ಬೆಂಗಳೂರು : ಆಂಧ್ರಪ್ರದೇಶ ಅಬಕಾರಿ ಹಗರಣಕ್ಕೆ ಸಂಬಂಧಪಟ್ಟಂತೆ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಆಂಧ್ರ ಮಾಜಿ ಸಚಿವ ಚೆವಿ ರೆಡ್ಡಿಯನ್ನು ಬಂಧಿಸಲಾಗಿದೆ.
ಮಾಜಿ ಸಚಿವ ಚೆವಿ ರೆಡ್ಡಿ ಅವರ ಮೇಲೆ ಕೋಟ್ಯಂತರ ರೂ. ಲಿಕ್ಕರ್ ಹಗರಣದ ಆರೋಪವಿದೆ. ಈ ಹಿನ್ನೆಲೆ ಚೆವಿ ರೆಡ್ಡಿ ವಿರುದ್ಧ ಆಂಧ್ರ ಪೊಲೀಸರು ಲುಕೌಟ್ ನೋಟಿಸ್ ಜಾರಿ ಮಾಡಿದ್ದರು.
ಚೆವಿ ರೆಡ್ಡಿ ಇಂದು ಬೆಳಗ್ಗೆ ಬೆಂಗಳೂರು ವಿಮಾನ ನಿಲ್ದಾಣದ ಮೂಲಕ ಶ್ರೀಲಂಕಾಗೆ ಪರಾರಿಯಾಗಲು ಯತ್ನಿಸಿದ್ದರು. ಈ ವೇಳೆ ವಿಮಾನ ನಿಲ್ದಾಣದಲ್ಲೇ ಪೊಲೀಸರು ಚೆವಿ ರೆಡ್ಡಿಯನ್ನು ಅರೆಸ್ಟ್ ಮಾಡಿದ್ದಾರೆ.