ವಿಜಯನಗರ: ಗೃಹಲಕ್ಷ್ಮಿ ಹಣವನ್ನು ಪ್ರತಿ ತಿಂಗಳು ಕೊಡುತ್ತೇವೆ ಅಂತ ಹೇಳಿಲ್ಲ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಉಲ್ಟಾ ಹೊಡೆದಿದ್ದಾರೆ.
ವಿಜಯನಗರದಲ್ಲಿ ಕಾಂಗ್ರೆಸ್ ಸಾಧನಾ ಸಮಾವೇಶ ಕುರಿತ ಸುದ್ದಿಗೋಷ್ಠಿಯಲ್ಲಿ ಗೃಹ ಲಕ್ಷ್ಮೀ ಹಣ ವಿಳಂಬದ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೋಡ್ರಿ ತಿಂಗಳು ತಿಂಗಳು ಹಣ ಕೊಡ್ತೀವಿ ಅಂತ ನಾವು ಹೇಳಿಲ್ಲ. ನೀವು ಟ್ಯಾಕ್ಸ್ ಕಟ್ಟುತ್ತಾ ಇರಬೇಕು. ನಾವು ದುಡ್ಡು ಕೊಡ್ತಾ ಇರಬೇಕು ಎಂದರು.
ಈಗ ಗುತ್ತಿಗೆ ಕೆಲಸ ಮಾಡುವವರಿಗೆ ನಾಳೆನೇ ಹಣ ಬಂದುಬಿಡುತ್ತಾ? 2, 3, 5 ವರ್ಷ ಆಗುತ್ತೆ ಅಲ್ವಾ. ಅದೇ ರೀತಿ ಇದೂ ಕೂಡ ಬಂದಾಗ ಬರುತ್ತೆ ಎಂದರು.