ಬೆಂಗಳೂರು: ವಿಧಾನ ಪರಿಷತ್ ಸದಸ್ಯ H.ವಿಶ್ವನಾಥ್ ಮುಂಬರುವ ಯಾವುದೇ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಘೋಷಿಸಿದ್ದರು.
ನಾನು ಹಲವು ಬಾರಿ ಚುನಾವಣೆ ಎದುರಿಸಿದಾಗ ಜನರೇ ಹಣ ನೀಡಿ ಆಶೀರ್ವಾದ ಮಾಡಿದ್ದರು. ಆದರೆ ಈಗ ಹಣ ನೀಡಿ ಚುನಾವಣೆ ಎದುರಿಸುವ ಪರಿಸ್ಥಿತಿ ನಿರ್ಮಾಣವಾಗಿದೆ.
ಸದ್ಯದ ಪರಿಸ್ಥಿತಿಯಲ್ಲಿ ವಿಧಾನಸಭೆ ಚುನಾವಣೆ ಎದುರಿಸಲು 50 ಕೋಟಿ ಹಣ ಬೇಕು. ಆ ಶಕ್ತಿ ಈಗ ನನ್ನಲ್ಲಿ ಇಲ್ಲ.ನಾನು ರಾಜಕೀಯದಲ್ಲಿ ಮುಂದುವರಿಯುತ್ತೇನೆ, ಆದರೆ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಅವರು ತಿಳಿಸಿದ್ದಾರೆ.




























