ನವದೆಹಲಿ : ಬೀದಿನಾಯಿಗಳ ಕಡಿತದಿಂದ ಜೀವ ಕಳೆದುಕೊಂಡವರ ಕುಟುಂಬಕ್ಕೆ ಹಾಗೂ ಗಾಯಗೊಂಡವರಿಗೆ ಸರ್ಕಾರವೇ ಪರಿಹಾರ ನೀಡಬೇಕೆಂದು ಸುಪ್ರೀಂಕೋರ್ಟ್ ಹೇಳಿದೆ.
ಬೀದಿ ನಾಯಿಗಳಿಂದ ಮಕ್ಕಳು ಮತ್ತು ವೃದ್ಧ ಸಾವನ್ನಪ್ಪಿದರೆ ಅಥವಾ ಗಾಯಗೊಂಡರೆ ಯಾರು ಹೊಣೆಗಾರರಾಗಬೇಕು ಎಂದು ಸುಪ್ರೀಂ ಕೋರ್ಟ್ ಪ್ರಶ್ನಿಸಿದೆ. ವಿಕ್ರಮ್ ನಾಥ್, ಸಂದೀಪ್ ಮೆಹ್ತಾ ಮತ್ತು ಎನ್.ವಿ. ಅಂಜಾರಿಯಾ ಅವರನ್ನೊಳಗೊಂಡ ಸುಪ್ರೀಂ ಕೋರ್ಟ್ ನ್ಯಾಯಪೀಠವು ಪ್ರಕರಣದ ವಿಚಾರಣೆ ನಡೆಸಿತು.
9 ವರ್ಷದ ಮಗುವಿನ ಸಾವನ್ನು ಉಲ್ಲೇಖಿಸಿ, ನಾಯಿ ಪ್ರಿಯರ ಸಂಘಟನೆಗಳು ಪೋಷಿಸುವ ಬೀದಿ ನಾಯಿಗಳಿಂದ 9 ವರ್ಷದ ಮಗು ಸಾವನ್ನಪ್ಪಿದರೆ ಯಾರು ಹೊಣೆಗಾರರಾಗಬೇಕು ಎಂದು ನ್ಯಾಯಪೀಠ ಪ್ರಶ್ನಿಸಿತು. ನ್ಯಾಯಾಲಯವು ಕಣ್ಣು ಮುಚ್ಚಿ ಎಲ್ಲವೂ ನಡೆಯಲು ಬಿಡಬೇಕೇ ಎಂದು ನ್ಯಾಯಾಲಯ ಕೇಳಿತ್ತು.
ಕೇವಲ ನಾಯಿಯ ಮೇಲಷ್ಟೇ ಕನಿಕರವೇಕೆ?, ಮಾನವನ ಮೇಲಿನ ದಾಳಿಗಳ ಮೇಲೆ ಏಕೆ ಮಾತನಾಡುತ್ತಿಲ್ಲ. ಹೊಣೆಗಾರಿಕೆಗಾಗಿ ಕಠಿಣ ಚೌಕಟ್ಟನ್ನು ಸ್ಥಾಪಿಸುವ ಬಗ್ಗೆ ಯೋಚಿಸುತ್ತಿರುವುದಾಗಿ ಪೀಠ ಸೂಚಿಸಿದೆ. ನಾಯಿ ಕಡಿತದಿಂದ ಉಂಟಾಗುವ ಸಾವುಗಳು ಮತ್ತು ಗಾಯಗಳಿಗೆ ರಾಜ್ಯವು ಪರಿಹಾರವನ್ನು ಪಾವತಿಸಬೇಕು. ನಾಯಿ ಮಾಲೀಕರು ಮತ್ತು ಅವುಗಳನ್ನು ಪ್ರತಿನಿಧಿಸುವ ಸಂಸ್ಥೆಗಳ ಮೇಲೆಯೂ ಜವಾಬ್ದಾರಿ ಇದ್ದು ಪರಿಹಾರ ನಿಗದಿಪಡಿಸಲಾಗುವುದು ಎಂದು ನ್ಯಾಯಾಲಯ ಹೇಳಿದೆ.
ಜನರು ನಾಯಿಗಳಿಗೆ ಆಹಾರ ನೀಡಲು ಅಥವಾ ಆರೈಕೆ ಮಾಡಲು ಬಯಸಿದರೆ, ಅವರು ಅದನ್ನು ತಮ್ಮ ಸ್ವಂತ ಆವರಣದಲ್ಲಿ ಮಾಡಬೇಕು ಅಥವಾ ತಮ್ಮ ಸ್ವಂತ ಮನೆಯಲ್ಲಿಯೇ ಸಾಕಬೇಕು ಮತ್ತು ತಮ್ಮ ಸ್ವಂತ ಮನೆಯಲ್ಲಿಯೇ ಆಹಾರ ನೀಡಬೇಕು ಎಂದು ಸುಪ್ರೀಂ ಕೋರ್ಟ್ ಪೀಠವು ಹೇಳಿದೆ.

































