ಬಾಗಲಕೋಟೆ: ದಸರಾ ವೇಳೆಗೆ ರಾಜ್ಯದಲ್ಲಿ ಮಧ್ಯಂತರ ಚುನಾವಣೆ ಬರುವುದು ಫಿಕ್ಸ್ ಎಂದು ಮಾಜಿ ಸಚಿವ ಶ್ರೀರಾಮುಲು ಭವಿಷ್ಯ ಹೇಳಿದ್ದಾರೆ.!
ಬಾಗಲಕೋಟೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವುದೇ ಕ್ಷಣದಲ್ಲಾದರೂ ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರ ಪತನವಾಗಬಹುದು. ಈ ಹಿಂದೆಯೂ ಕಾಂಗ್ರೆಸ್ ಸರ್ಕಾರವನ್ನು ಕಾಂಗ್ರೆಸ್ ನವರೇ ಕೆಡವಿದ್ದರು, ಈ ಬಾರಿಯೂ ಅಧಿಕಾರ ಹಸ್ತಾಂತರ ವಿಷಯವಾಗಿ ಕಾಂಗ್ರೆಸ್ ಸರ್ಕಾರ ಪತನವಾಗಲಿದ್ದು, ರಾಜ್ಯದಲ್ಲಿ ನಾವು ಮತ್ತೆ ಬಿಜೆಪಿ ಬಾವುಟ ಹಾರಿಸುವ ಕೆಲಸ ಮಾಡುತ್ತೇವೆ ಎಂದು ಹೇಳಿದ್ದಾರೆ.