ಉಡುಪಿ : ಕೃಷಿ ಇಲಾಖೆಯ ವತಿಯಿಂದ ಕರ್ನಾಟಕ ರೈತ ಸಮೃದ್ಧಿ ಯೋಜನೆಯಡಿ ಸಾಮರ್ಥ್ಯಾಭಿವೃದ್ಧಿ, ವಿನ್ಯಾಸ ಪ್ಯಾಕೇಜಿಂಗ್ ವಿನ್ಯಾಸ ಹಾಗೂ ಮೌಲ್ಯವರ್ಧನೆ ಸರಪಳಿಯಡಿಯಲ್ಲಿನ ಚಟುವಟಿಕೆಗಳ ಬಲವರ್ಧನೆಗೆ ಆರ್ಥಿಕ ನೆರವು ಪಡೆಯಲು ಆಸಕ್ತ ರೈತ ಉತ್ಪಾದಕ ಸಂಸ್ಥೆಗಳು ಸ್ವಸಹಾಯ ಸಂಘಗಳು ರೈತ ಗುಂಪುಗಳು ಮತ್ತು ರೈತ ಸಾವಯವ ಒಕ್ಕೂಟಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಅಕ್ಟೋಬರ್ 9 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ರೈತ ಸಂಪರ್ಕ ಕೇಂದ್ರ, ತಾಲೂಕು ಸಹಾಯಕ ಕೃಷಿ ನಿರ್ದೇಶಕರ ಕಛೇರಿ ಅಥವಾ ಜಿಲ್ಲಾ ಕೃಷಿ ಇಲಾಖೆಯ ಜಂಟಿ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಜಂಟಿ ಕೃಷಿ ನಿರ್ದೇಶಕರ ಪ್ರಕಟಣೆ ತಿಳಿಸಿದೆ.