ಇಸ್ಲಾಂ ಎಂದರೆ ಶಾಂತಿ, ಬಸವಣ್ಣರಂತೆ ಪ್ರವಾದಿಗಳು ಕೆಲಸ ಮಾಡಿದ್ದಾರೆ: ಸಿಎಂ ಸಿದ್ದರಾಮಯ್ಯ

WhatsApp
Telegram
Facebook
Twitter
LinkedIn

ಬೆಂಗಳೂರು: ಇಸ್ಲಾಂ ಎಂದರೆ ಶಾಂತಿ, ಮೊಹಮದ್‌ ಪ್ರವಾದಿ ಎಂದರೆ ಶಾಂತಿಯ ದೂತ. ಪ್ರವಾದಿ ಅವರು, ಬಸವಣ್ಣ ಅವರಂತೆ ಶಾಂತಿ, ಸಮಾನತೆ, ಬಡತನ ಹೋಗಬೇಕು ಅಂತಾ ಹೇಳಿ ಹೋರಾಟ ಮಾಡಿದ್ದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಹೇಳಿದರು.

ಅರಮನೆ ಮೈದಾನದಲ್ಲಿ ಮಿಲಾದ್ ಸಮಿತಿ ಆಯೋಜಿಸಿದ್ದ “ಅಂತಾರಾಷ್ಟ್ರೀಯ ಮಿಲಾದುನ್ನಬೀ ಸಮಾವೇಶ”ದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಪರಧರ್ಮ ಸಹಿಷ್ಣುತೆ ಸಂವಿಧಾನದ ಮೂಲ‌ ಆಶಯವಾಗಿದ್ದು ಸಂವಿಧಾನದ ಪಾಲನೆಯೇ ನಮ್ಮೆಲ್ಲರ ಗುರಿಯಾಗಲಿ. ಪ್ರವಾದಿಯವರ ಬೋಧನೆಗಳು ಮಾನವ ಇತಿಹಾಸದಲ್ಲಿ ಕ್ರಾಂತಿಕಾರಿ ಬದಲಾವಣೆಗಳನ್ನು ತಂದವು. ಅವರು ಸಮಸ್ತ ಮಾನವಕೋಟಿಗೆ ನ್ಯಾಯ, ಸಮಾನತೆ ಮತ್ತು ಧಾರ್ಮಿಕ ಸೌಹಾರ್ದದ ಮಾರ್ಗಗಳನ್ನು ತೋರಿಸಿದರು. ಬಸವಣ್ಣನವರ ನೇತೃತ್ವದ ಶರಣ ಚಳವಳಿಯೂ ಕೂಡ ಮಾನವ ಕುಲ ಒಂದೇ ಎನ್ನುವ ಮೌಲ್ಯವನ್ನೇ ಸಾರಿತ್ತು ಎಂದು ಹೇಳಿದರು.

ಪ್ರವಾದಿಗಳು ಶಾಂತಿಯ ಧೂತರು. ಇಡೀ ಮಾನವ ಕುಲ ಶಾಂತಿಗಾಗಿ, ಪರಸ್ಪರತೆ, ಸಹೋದರತ್ವಕ್ಕಾಗಿ ಕೆಲಸ ಮಾಡಬೇಕು ಎನ್ನುವುದು ಪ್ರವಾದಿಗಳ ಬೋಧನೆಯಾಗಿದೆ. ನಮ್ಮ ಸಂವಿಧಾನದ ಮೂಲ ಆಶಯ ಕೂಡ ಭ್ರಾತೃತ್ವ ಮತ್ತು ಪರಧರ್ಮ ಸಹಿಷ್ಣುತೆಯೇ ಆಗಿದೆ. ಆದ್ದರಿಂದ ಸಂವಿಧಾನವನ್ನು ಆಚರಿಸುವುದು, ಪಾಲಿಸುವುದು ನಮ್ಮೆಲ್ಲರ ಗುರಿಯಾಗಲಿ ಎಂದು ತಿಳಿಸಿದರು.

BC Suddi   About Us
BC Suddi Bcsuddi is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World. Read More
For Feedback - [email protected]

Related News

LATEST Post

WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

WhatsApp Icon Telegram Icon