ಬೆಂಗಳೂರು : ಅಕ್ರಮ ಚಿನ್ನ ಸಾಗಾಟ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ನಟಿ ರನ್ಯಾರಾವ್, ಆಕೆಯ ಸಹಚರರಾದ ತರುಣ್ ಕೊಂಡುರಾಜು ಮತ್ತು ಬಳ್ಳಾರಿಯ ಸಾಹಿಲ್ ಜೈನ್ನ ನ್ಯಾಯಾಂಗ ಬಂಧನ ಅವಧಿಯನ್ನು ಏ.21ರವರೆಗೆ ವಿಸ್ತರಿಸಿ ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿದೆ.
ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ಮುಕ್ತಾಯಗೊಂಡಿದ್ದರಿಂದ ಮೂವರನ್ನು ಸೋಮವಾರ ಕೋರ್ಟ್ಗೆ ಹಾಜರು ಪಡಿಸಲಾಗಿತ್ತು. ಈ ವೇಳೆ ಕೋರ್ಟ್ ಆರೋಪಿಗಳ ನ್ಯಾಯಾಂಗ ಬಂಧನ ಅವಧಿಯನ್ನು ಏ.21ರವರೆಗೆ ವಿಸ್ತರಿಸಿ ಆದೇಶಿಸಿದೆ.
ಈ ಮಧ್ಯೆ ಆರೋಪಿಗಳ ಪೈಕಿ ತರುಣ್ಕೊಂಡುರಾಜು ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆಯನ್ನು ಸೆಷನ್ಸ್ ಕೋರ್ಟ್ ತಿರಸ್ಕಾರ ಮಾಡಿದೆ. ಆರೋಪಿ ಗಂಭೀರ ಸ್ವರೂಪದ ಪ್ರಕರಣದಲ್ಲ ಭಾಗಿಯಾಗಿದ್ದಾನೆ. ಮತ್ತೂಂದೆಡೆ ಪ್ರಕರಣದ ತನಿಖೆ ಇನ್ನು ನಡೆಯುತ್ತಿದೆ. ಈ ವೇಳೆ ಆರೋಪಿ ಜಾಮೀನು ನೀಡಬಾರದು ಎಂದು ಡಿಐಆರ್ ಪರ ವಕೀಲರು ಕೋರ್ಟ್ಗೆ ಮನವಿ ಮಾಡಿದರು.
ವಕೀಲರ ಮನವಿಗೆ ಸಮ್ಮತಿಸಿದ ಕೋರ್ಟ್ ಆರೋಪಿಯ ಜಾಮೀನು ಅರ್ಜಿ ತಿರಸ್ಕರಿಸಿದೆ. ಇನ್ನು ಮತ್ತೊಬ್ಬ ಆರೋಪಿ ಸಾಹಿಲ್ ಜೈನ್ ಕೂಡ ಜಾಮೀನು ನೀಡುವಂತೆ ಅರ್ಜಿ ಸಲ್ಲಿಸಿದ್ದು, ವಿಚಾರಣೆಯನ್ನು ಏ.9ಕ್ಕೆ ಮುಂದೂಡಿ ಸೆಷನ್ಸ್ ಕೋರ್ಟ್ ಆದೇಶ ಹೊರಡಿಸಿದೆ.