ಸ್ವತಂತ್ರ ಲಿಂಗಾಯತ ಧರ್ಮದ ವಿಚಾರಗಳನ್ನು ಇಟ್ಟುಕೊಂಡು ರಾಜಕಾರಣಿಗಳನ್ನು ಬಿಟ್ಟು, ಶರಣರ ತತ್ವಗಳನ್ನು ನಡೆ-ನುಡಿಯಲ್ಲಿ ಪಾಲಿಸುವ ಸ್ವಾಮೀಜಿಯವರನ್ನು ಒಳಗೊಂಡಂತೆ, ಸ್ವತಂತ್ರ ಲಿಂಗಾಯತ ಧರ್ಮ ಕಟ್ಟುವಲ್ಲಿ ತಮ್ಮಗಳ ಅಭಿಪ್ರಾಯಗಳನ್ನು ಸೇರಿಸಿ ಒಂದು ವೇದಿಕೆ. ಹಾಗೂ ಚರ್ಚೆ ಪ್ರಾರಂಭಿಸ ಬಹುದೆಂಬ ಸದಾಶಯ.
https://chat.whatsapp.com/LQ14M5ZLA9qI1OgBARElbD ಈ ಲಿಂಕ್ ನಲ್ಲಿ ನಿಮ್ಮಗಳ ಚರ್ಚೆ ಅಭಿಪ್ರಾಯ ಹಂಚಿಕೊಳ್ಳಿ
ವಚನ:
ಭಕ್ತಿಯೆಂಬುದು ಬೇರು, ವಿರಕ್ತಿಯೆಂಬುದೆ ಮರ, ಫಲವೆಂಬುದೆ ಜ್ಞಾನ.
ಪಕ್ವಕ್ಕೆ ಬಂದಿತ್ತೆಂಬಾಗಲೆ ಜ್ಞಾನ ಬಾ, ಮಾಯೆ ಹೋಗೆಂದು ಕಳುಹುತ್ತಿದ್ದೇನೆ.
ಅರಿವು ಬಾ, ಅಜ್ಞಾನ ಹೋಗೆಂದು ಕಳುಹುತ್ತಿದ್ದೇನೆ.
ನಿಃಕಲ ಬಾ, ಸಕಲ ಹೋಗೆಂದು ಕಳುಹುತ್ತಿದ್ದೇನೆ.
ನಿಃಪ್ರಪಂಚ ಬಾ, ಪ್ರಪಂಚ ಹೋಗೆಂದು ಕಳುಹುತ್ತಿದ್ದೇನೆ.
ಕೂಡಲಸಂಗಮದೇವರಲ್ಲಿ ಬಸವಣ್ಣನ ಬಲ್ಲವರನೊಳಗೆ ಕೂಡಿಅರಿಯದವರ ಹೊರಗೆ ತಡೆವುತ್ತಿದ್ದೇನೆ.
-ಉಗ್ಘಡಿಸುವ ಗಬ್ಬಿದೇವಯ್ಯ