Bcsuddi Kannada News
www.bcsuddi.com is an Kannada web portal founded by Basavaraju C. The website provides news updates, karnataka, india, world, sports, entertainment, film news in Kannada

[vc_row][vc_column]

BREAKING NEWS

[/vc_column][/vc_row]

ಕಾಪು: ಭಾರೀ ಗಾಳಿ ಮಳೆಗೆ ಚಲಿಸುತ್ತಿದ್ದ ರಿಕ್ಷಾದ ಮೇಲೆ ಬಿದ್ದ ಮರ- ಇಬ್ಬರು ಮೃತ್ಯು

0

ಕಾಪು: ಭಾರೀ ಗಾಳಿ ಮಳೆಯಿಂದಾಗಿ ರಸ್ತೆ ಬದಿಯ ಮರವೊಂದು ಚಲಿಸುತ್ತಿದ್ದ ರಿಕ್ಷಾದ ಮೇಲೆ ಬಿದ್ದ ಪರಿಣಾಮ ಇಬ್ಬರು ಪ್ರಯಾಣಿಕರು ಮೃತಪಟ್ಟ ಘಟನೆ ಮಜೂರು ಮಸೀದಿ ಬಳಿ ಇಂದು ರಾತ್ರಿ ವೇಳೆ ನಡೆದಿದೆ.

ಮೃತರನ್ನು ಶಿರ್ವ ಶಾಂತಿಗುಡ್ಡೆಯ ಪುಷ್ಪಾ(45) ಹಾಗೂ ಅವರ ಮೈದುನ ಎಂದು ಗುರುತಿಸಲಾಗಿದೆ. ಕಾಪು ಕಡೆಯಿಂದ ಶಿರ್ವ ಕಡೆಗೆ ಪ್ರಯಾಣಿಕರನ್ನು ಕರೆದುಕೊಂಡು ಹೋಗುತ್ತಿದ್ದ ಶರೀಫ್ ಎಂಬವರ ರಿಕ್ಷಾ ಮತ್ತು ಶಿರ್ವ ಕಡೆಯಿಂದ ಕಾಪು ಕಡೆಗೆ ಬರುತ್ತಿದ್ದ ದಿನೇಶ್ ಎಂಬವರ ರಿಕ್ಷಾದ ಮೇಲೆ ಮರ ಬಿತ್ತೆನ್ನಲಾಗಿದೆ.

ನೇಮಕಾತಿ: ದೇಶದ ಗಡಿ ಕಾಯುವ ಅಗ್ನಿವೀರರಿಗೆ ರೈಲ್ವೆ ಉದ್ಯೋಗದಲ್ಲಿ ಶೇ 15ರಷ್ಟು ಮೀಸಲಾತಿ

ಇದರಿಂದ ಎರಡೂ ರಿಕ್ಷಾಗಳು ಸಂಪೂರ್ಣ ಜಖಂಗೊಂಡಿದ್ದು, ಈ ಎರಡು ರಿಕ್ಷಾಗಳ ಚಾಲಕರು ಅಪಾಯದಿಂದ ಪಾರಾದರು. ಶರೀಫ್‌ನ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ರಿಕ್ಷಾದೊಳಗೆ ಸಿಲುಕಿ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲಿಯೇ ಮೃತಪಟ್ಟರು. ಸುಮಾರು ಒಂದೂವರೆ ಗಂಟೆಗಳ ಕಾರ್ಯಾಚರಣೆ ಬಳಿಕ ರಿಕ್ಷಾದ ಮೇಲೆ ಬಿದ್ದ ಮರವನ್ನು ತೆರವುಗೊಳಿಸಿ ಮೃತದೇಹವನ್ನು ಹೊರಗೆ ತೆಗೆಯಲಾಯಿತು. ಸ್ಥಳದಲ್ಲಿ ಕಾಪು ಪೊಲೀಸರು ಹಾಜರಿದ್ದರು.

Leave A Reply

Your email address will not be published.