ಲೋಕಾಯುಕ್ತ ಹೆಸರು ಹೇಳಿ ಸರಕಾರಿ ಕೇಸಲ್ಲಿ ನಿವೃತ್ತ ಹೆಡ್ ಕಾನ್ಸ್ಟೇಬಲ್ ನಿಂಗಪ್ಪ ಬಂಧನವಾಗಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಸನಿಖಾಧಿಕಾರಿಗಳು ಹಲವು ಸಾಕ್ಷಿಗಳನ್ನು ಕಲೆ ಹಾಕಿದ್ದಾರೆ. ಲೋಕಾಯುಕ್ತ ಎಸ್ಪಿ ಶ್ರೀನಾಥ್ ಜೋಶಿ ಅವರ ಮನೆ ಮೇಲೆ ಲೋಕಾಯುಕ್ತ ತನಿಖಾಧಿಕಾರಿಗಳು ದಾಳಿ ಮಾಡಿದ್ದಾರೆ.
ತ್ರಿನಾಥ್ ಜೋಶಿ ಅವರು ವಾಸವಿರುವ ಕೋರಮಂಗಲದ ಮನೆಯಲ್ಲಿ 2015ರ ಜೂನ್ 15ರಂದು ಡಿವೈಎಸ್ಪಿ ಶ್ರೀನಿವಾಸ್ ನೇತೃತ್ವದ ತಂಡವು ಶೋಧ ಕಾರ್ಯಾಚರಣೆ ನಡೆಸಿತ್ತು. ಈ ವೇಳೆ ಜೋಶಿ ಅವರು ಮನೆಯಲ್ಲಿ ಇರಲಿಲ್ಲ, ಅವರ ಪುತ್ರ ಮನೆಯಲ್ಲಿದ್ದರು. ಜೋತಿ ಅವರು ತಲೆಮರೆಸಿಕೊಂಡಿದ್ದಾರೆ. ಶೋಧ ಕಾರ್ಯಾಚರಣೆಯಲ್ಲಿ ಯಾವುದೇ ದಾಖಲೆಗಳು ಲಭ್ಯವಾಗಿಲ್ಲ, ಬಂಧಿತ ಆರೋಪಿ ನಿಂಗಪ್ಪ ಕೋಟ್ಯಂತರ ರು. ವಸೂಲಿ ಮಾಡಿರುವ ಗಂಭೀರ ಆರೋಪಕ್ಕೆ ಸಂಬಂಧಿಸಿದಂತೆ ತನಿಖಾಧಿಕಾರಿಯು ಹಲವು ಪುರಾವೆ ಸಾಕ್ಷ್ಯಗಳನ್ನು ಕಲೆಹಾಕಿದ್ದಾರೆ. ಈ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಲೋಕಾಯುಕ್ತ ಎಸ್ಪಿ ಶ್ರೀನಾಥ್ ಜೋಟಿ ಅವರನ್ನು ಎತ್ತಂಗಡಿ ಮಾಡಲಾಗಿತ್ತು.
ಆರೋಪಕ್ಕೆ ಗುರಿಯಾಗಿರುವ ಎಸ್ಪಿ ಶ್ರೀನಾಥ ಜೋಡಿ ಅವರೊಂದಿಗೆ ಮುಖ್ಯಮಂತ್ರಿ ಸಚಿವಾಲಯದ ಉನ್ನತ ಅಧಿಕಾರಿಗಳಿಬ್ಬರು ನಿಕಟ ಸಂಪರ್ಕ ಹೊಂದಿದ್ದರು. ಮತ್ತು ಕೆಲವು ಪ್ರಕರಣಾಗಳಲ್ಲಿ ಅವರು ನೆರವು ಕೋರಿದ್ದರು ಎಂದು ತಿಳಿದುಬಂದಿದೆ. ಈ ನಿಟ್ಟಿನಲ್ಲಿ ತನಿಖೆಯೂ ನಡೆದಿದೆ ಎಂದು ಗೊತ್ತಾಗಿದೆ.
ಬಂಧಿತ ಆರೋಪಿ ನಿಂಗಪ್ಪ ಎಂಬಾತನೊಂದಿಗೆ ಹಾಲಿ ರಾಜ್ಯ ಸರಕಾರದ ಪ್ರಭಾವಿ ಮೂವರು ಸಚಿವರ ಆಪ್ತ ಕಾರ್ಯದರ್ಶಿಗಳು ನಿಕಟ ಸಂಪರ್ಕ ಹೊಂದಿದ್ದರು ಎಂದು ಹೇಳಲಾಗಿದೆ.
ನಿಂಗಪ್ಪ ಮೂಲತಃ ಚಿತ್ರಮರ್ಗದ ಹೊಸದುರ್ಗದಲ್ಲಿ ಕಾರ್ಯನಿರ್ವಹಿಸಿದ್ದ. ಆ ಅವಧಿಯಲ್ಲಿಯೇ ಲೋಕಾಯುಕ್ತ ಎಸ್ಪಿ ಶ್ರೀನಾಥ ಜೋಶಿ ಅವರು ಸಹ ಚಿತ್ರದುರ್ಗದಲ್ಲಿ ಸಂಪರ್ಕದಲ್ಲಿದ್ದ ಎಂದು ಹೇಳಲಾಗಿದೆ. ಬಂಧಿತ ಆರೋಪಿ ಹೆಡ್ ಕಾನ್ಸ್ಟೇಬಲ್ ನಿಂಗಪ್ಪ ಕರ್ತವ್ಯಕ್ಕೆ ಆನಧಿಕೃತವಾಗಿ ಗೈರು ಹಾಜರಾಗಿದ್ದ, ಹಲವು ಬಾರಿ ತಿಳಿವಳಿಕೆ ನೋಟೀಸ್ ನೀಡಿದರೂ ಸಹ ಯಾವುದೇ ಪ್ರತಿಕ್ರಿಯೆ ಮತ್ತು ಉತ್ತರವನ್ನೂ ನಿರಡಿರಲಿಲ್ಲ. ಹಾಗಾಗಿ ಆತನನ್ನು ಸೇವೆಯಿಂದ ವಜಾಗೊಳಿಸಲಾಗಿತ್ತು.ವಜಾಗೊಂಡ ಆದೇಶವನ್ನೂ ನಿಂಗಪ್ಪ ಪಡೆದಿಲ್ಲ ಎಂದು ಗೊತ್ತಾಗಿದೆ.