ಬಾಗಲಕೋಟೆ : ರಾಜ್ಯದಲ್ಲಿ ಶೀಘ್ರವೇ 16,500 ಶಿಕ್ಷಕರ ನೇಮಕಾತಿ ಮಾಡಲಾಗುತ್ತದೆ ಎಂದು ಸಚಿವ ಮಧು ಬಂಗಾರಪ್ಪ ಘೋಷಣೆ ಮಾಡಿದ್ದಾರೆ.
ಬಾಗಲಕೋಟೆ ಜಿಲ್ಲಾ ಪಂಚಾಯತ್ ಸಭಾ ಭವನದಲ್ಲಿ “ಶಿಕ್ಷಣ ಇಲಾಖಾ ಪ್ರಗತಿ ಪರಿಶೀಲನಾ ಸಭೆ” ನಡೆಸಲಾಯಿತು. ಈ ವೇಳೆ ಅವರು ಸುದ್ದಿಗಾರರ ಜೊತೆ ಮಾತನಾಡಿದರು.
ಶಾಲೆಗಳಲ್ಲಿ ಈ ವರ್ಷವೇ ಹಲವು ಬದಲಾವಣೆ ಮಾಡಲಾಗುತ್ತದೆ. ಆದರ್ಶ ಶಾಲೆಗಳಲ್ಲಿ ಈ ವರ್ಷದಿಂದಲೇ ಪಿಯುಸಿ ಕಾಲೇಜು ಆರಂಭಿಸಲು ಅನುಮತಿ ನೀಡಲಾಗಿದೆ. ಶಾಲೆಗಳಿಗೆ ಮೂಲಭೂತ ಸೌಲಭ್ಯ ಒದಗಿಸಲು ಆದ್ಯತೆ ನೀಡಲಾಗುವುದು ಎಂದು ಸಚಿವರು ಹೇಳಿದರು.
ಶಿಕ್ಷಣ ಇಲಾಖೆಯ ಅಧಿಕಾರಿಗಳೊಂದಿಗೆ “ಸರ್ಕಾರಿ ಶಾಲೆಗಳ ಸುಧಾರಣೆಗೆ” ಕೈಗೊಳ್ಳಬೇಕಾದ ಹಲವಾರು ವಿಷಯಗಳ ಕುರಿತು ಸಮಗ್ರವಾಗಿ ಚರ್ಚಿಸಿ, ಅಗತ್ಯ ಸಲಹೆ-ಸೂಚನೆಗಳನ್ನು ನೀಡಲಾಯಿತು.