ಮಂಗಳೂರು ; ಸುಹಾಸ್ ಶೆಟ್ಟಿ ಹತ್ಯೆ ಪ್ರಮುಖ ಆರೋಪಿ ಚೊಟ್ಟೆ ನೌಷದ್ ಮೇಲೆ ಮಂಗಳೂರು ಜೈಲಿನಲ್ಲಿ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಅದೃಷ್ಟವಶಾತ್ ಪರಾದ ನೌಷಾದ್ ಪ್ರಾಣಾಪಾಯದಿಂದ ಪಾರಾದ ಘಟನೆ ನಡೆದಿದೆ.
ಪ್ರಮುಖ ಆರೋಪಿ ಚೊಟ್ಟೆ ನೌಷಾದ್ ನ ಪೊಲೀಸ್ ಕಸ್ಟಡಿ ಅಂತ್ಯವಾಗಿದ್ದು ಕೋರ್ಟ್ ಗೆ ಚೊಟ್ಟೆ ನೌಷಾದ್ ನನ್ನು ಪೊಲೀಸರು ಹಾಜರುಪಡಿಸಿದ್ದರು. ಬಳಿಕ ಮೈಸೂರು ಜೈಲಿಗೆ ಶಿಫ್ಟ್ ಮಾಡಲು ತಯಾರಿ ನಡೆಸಿದ್ದರು.
ಈ ಮದ್ಯೆ ಮಂಗಳೂರು ಜೈಲಿನಲ್ಲಿ ಯಾರನ್ನೊ ನೋಡಬೇಕು ಎಂದಿದ್ದ ನೌಷಾದ್ ಜೈಲಿನಲ್ಲಿ ಮತ್ತೋರ್ವ ಖೈದಿ ಭೇಟಿಗಾಗಿ ಕರೆದುಕೊಂಡು ಪೊಲೀಸರು ಹೋಗಿದ್ದರು. ಈ ವೇಳೆ ಇದ್ದಕಿದ್ದಂತೆ ನೌಷಾದ್ ಮೇಲೆ ಕಲ್ಲು ಮತ್ತು ಸಿಕ್ಕ ಸಿಕ್ಕ ವಸ್ತು ತೂರಿ ಅಟ್ಯಾಕ್ ಮಾಡಿದ್ದಾರೆ.
ಬಿ ಬ್ಯಾರಕ್ ನ ಖೈದಿಗಳಿಂದ ದಾಳಿಗೆ ಯತ್ನಿಸಿದ್ದು ದಾಳಿ ತಪ್ಪಿಸಲು ಪೋಲಿಸರ ನೆರವಿನೊಂಸಿ್ಎ ಅವಿತುಕೊಂಡು ಪಾರಾಗಿದ್ದಾನೆ.
ನೌಷದ್ ನನ್ನು ಮೈಸೂರು ಜೈಲ್ ಗೆ ಶಿಫ್ಟ್ ಮಾಡೋಮುನ್ನ ಈ ದಾಳಿ ಯತ್ನಿಸಿದ್ದು ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.