ಬೆಂಗಳೂರು: ತೀವ್ರ ಕುತೂಹಲ ಮೂಡಿಸಿದ್ದ ರಾಜಕೀಯ ವಿದ್ಯಮಾನವೊಂದಕ್ಕೆ ತೆರೆ ಬಿದ್ದಿದ್ದು, ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಸಚಿವ ರಾಮಲಿಂಗಾರೆಡ್ಡಿ ಅವರ ಮನವೊಲಿಸುವಲ್ಲಿ ಕಾಂಗ್ರೆಸ್ ಹೈಕಮಾಂಡ್ ಯಶಸ್ವಿಯಾಗಿದೆ. ಸಚಿವ ಸ್ಥಾನಕ್ಕೆ ನೀಡಿದ್ದ ರಾಜೀನಾಮೆಯನ್ನು ಅವರು ಅಧಿಕೃತವಾಗಿ ಹಿಂಪಡೆದಿದ್ದಾರೆ ಎಂದು ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಪ್ರಕಟಿಸಿದ್ದಾರೆ.
ನಗರದ ಖಾಸಗಿ ಹೋಟೆಲ್ನಲ್ಲಿ ರಾಮಲಿಂಗಾರೆಡ್ಡಿ ಅವರೊಂದಿಗೆ ಸುದೀರ್ಘ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸುರ್ಜೇವಾಲ, “ರಾಮಲಿಂಗಾರೆಡ್ಡಿ ಅವರು ತಮ್ಮ ರಾಜೀನಾಮೆಯನ್ನು ವಾಪಸ್ ಪಡೆದಿದ್ದಾರೆ. ಅವರು ಸಚಿವ ಸಂಪುಟದಲ್ಲಿ ಮುಂದುವರಿದು ಎಂದಿನಂತೆ ತಮ್ಮ ಜವಾಬ್ದಾರಿಯನ್ನು ನಿರ್ವಹಿಸಲಿದ್ದಾರೆ” ಎಂದು ಸ್ಪಷ್ಟಪಡಿಸಿದರು.





























