ಸಾಹಿತಿ ಬಿ.ಎಲ್.ವೇಣು ನಿವಾಸಕ್ಕೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ;

ಚಿತ್ರದುರ್ಗ; ಖ್ಯಾತ ಸಾಹಿತಿ, ಚಿಂತಕ ಬಿ.ಎಲ್.ವೇಣು ಅವರ ನಿವಾಸಕ್ಕೆ ಸ್ಥಳೀಯ ಶಾಸಕ ಕೆ.ಸಿ.ವೀರೆಂದ್ರ ಪಪ್ಪಿ ಅವರು ಭೇಟಿ ಮಾಡಿ, ಆಶೀರ್ವಾದ ಪಡೆದು, ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಲಹೆಗಳನ್ನು ಪಡೆದರು.

ಚಿತ್ರದುರ್ಗ ಶಾಸಕರಾಗಿ ಇದೇ ಪ್ರಥಮ ಬಾರಿಗೆ ಬಿ.ಎಲ್.ವೇಣು ಅವರ ನಿವಾಸಕ್ಕೆ ಆಗಮಿಸಿದ ವೀರೇಂದ್ರ ಪಪ್ಪಿ ಅವರನ್ನು ಆತ್ಮೀಯವಾಗಿ ಸ್ವಾಗತಿಸಲಾಯಿತು.

ಚಿತ್ರದುರ್ಗ ಕೋಟೆ ಅಭಿವೃದ್ಧಿ, ಕೋಟೆಯಲ್ಲಿ ಪ್ರವಾಸಿಗರಿಗೆ ಅನುಕೂಲಕರವಾಗಿ ಕುಡಿಯುವ ನೀರಿನ ವ್ಯವಸ್ಥೆ ಮಾಡುವುದರ ಬಗ್ಗೆ ಬಿ.ಎಲ್.ವೇಣು ಅವರು ಶಾಸಕರಿಗೆ ಸಲಹೆ ನೀಡಿದರು.

Advertisement

ಭದ್ರ ಮೇಲ್ದಂಡೆ ಯೋಜನೆ ಕಾಮಗಾರಿಯ ಬಗ್ಗೆ ಕೂಲಂಕುಷವಾಗಿ ಶಾಸಕರೊಂದಿಗೆ ಚರ್ಚಿಸಿದ ವೇಣು ಅವರು, ಜನತೆಗೆ ಅತೀ ಶೀಘ್ರದಲ್ಲೇ ಈ ಯೋಜನೆ ತಲುಪಬೇಕೆಂದು ತಾಕೀತು ಮಾಡಿದರು.  ಇದಕ್ಕೆ ಪ್ರತಿಕ್ರಿಯಿಸಿದ ಶಾಸಕರು, ಯೋಜನೆ ತ್ವರಿತ ಜಾರಿಗೆ ಸಂಬAಧಿಸಿದAತೆ ಸಚಿವರು, ಶಾಸಕರು ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯನವರೊಟ್ಟಿಗೆ ಕೈಗೊಂಡಿರುವ ಕ್ರಮಗಳ ಬಗ್ಗೆ ವಿವರಗಳನ್ನು ನೀಡಿದರು.

ದಾವಣಗೆರೆ-ತುಮಕೂರು ನೇರ ರೈಲ್ವೆ ಯೋಜನೆ ಬಗ್ಗೆಯೂ ಪ್ರಸ್ಥಾಪಿಸಿದ ವೇಣು ಅವರು, ಈ ನಿಟ್ಟಿನಲ್ಲಿ ಕಾರ್ಯ ವಿಳಂಭ ಮಾಡದೇ, ತುರ್ತು ಕೆಲಸಗಳು ಮಾಡುವುದು ಅಗತ್ಯವಿದೆ ಎಂದು ವಿವರಿಸಿದರು.

ಕ್ಷೇತ್ರದಲ್ಲಿ ಉತ್ತಮ ಕೆಲಸ ಕಾರ್ಯಗಳು ಮಾಡುವುದರೊಂದಿಗೆ ಜನಮನ್ನಣೆ ಗಣಿಸಬೇಕೆಂದು ಬಿ.ಎಲ್.ವೇಣು ಅªರು ಶಾಸಕರಿಗೆ ಸೂಚನೆಗಳನ್ನು ನೀಡಿದರು.

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement