ನವದೆಹಲಿ: ದೆಹಲಿಯ ತಾಯಂದಿರು ಸಹೋದರಿಯರು ಮೋದಿ ಅವರ ಭರವಸೆ ನಂಬಿ ಮೋಸ ಹೋಗಿದ್ದಾರೆ. ಈ ಗ್ಯಾರಂಟಿ ಯೋಜನೆ ಸಂಬಂಧ ಚರ್ಚಿಸಲು ಎಎಪಿ ನಿಯೋಗ ಭಾನುವಾರ ನಿಮ್ಮನ್ನು ಭೇಟಿ ಮಾಡಲು ಇಚ್ಛಿಸುತ್ತದೆ ಎಂದು ದೆಹಲಿ ಮಾಜಿ ಸಿಎಂ ಅತಿಶಿ ಪತ್ರ ಬರೆದಿದ್ದಾರೆ
ಮಹಿಳೆಯರಿಗೆ ತಿಂಗಳಿಗೆ 2,500 ರೂ. ಹಣ ನೀಡುವ ಗ್ಯಾರಂಟಿ ಯೋಜನೆ ಕುರಿತು ಚರ್ಚಿಸಲು ಭಾನುವಾರ ಸಮಯ ನೀಡುವಂತೆ ಕೋರಿ ನೂತನ ಸಿಎಂ ರೇಖಾ ಗುಪ್ತಾ ಅವರಿಗೆ ಅತಿಶಿ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಮೊದಲಿಗೆ ದೆಹಲಿಯ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ನಿಮಗೆ ಹೃತ್ಪೂರ್ವಕ ಅಭಿನಂದನೆಗಳು. ಬಿಜೆಪಿಯ ನಾಯಕ ಹಾಗೂ ದೇಶದ ಪ್ರಧಾನಿಯೂ ಆಗಿರುವ ನರೇಂದ್ರ ಮೋದಿ ಜಿ ಅವರು 2025ರ ಜ.31ರಂದು ದೆಹಲಿಯ ತಾಯಂದಿರು ಹಾಗೂ ಸಹೋದರಿಯರಿಗೆ ಭರವಸೆ ನೀಡಿದ್ದರು.
ದೆಹಲಿಯಲ್ಲಿ ಬಿಜೆಪಿ ಸರ್ಕಾರ ರಚನೆಯಾದ ಮೊದಲ ಕ್ಯಾಬಿನೆಟ್ ಸಭೆಯಲ್ಲಿ ತಿಂಗಳಿಗೆ 2,500 ರೂ. ಆರ್ಥಿಕ ನೆರವು ಯೋಜನೆಯನ್ನು ಜಾರಿಗೆ ತರುವುದಾಗಿ ಮೋದಿ ಭರವಸೆಯನ್ನು ಒತ್ತಿ ಹೇಳಿದ್ದರು.ದೆಹಲಿ ಸರ್ಕಾರ ಫೆ.20ರಂದು ತನ್ನ ಮೊದಲ ಕ್ಯಾಬಿನೆಟ್ ಸಭೆ ನಡೆಸಿತು. ಆದ್ರೆ ಯೋಜನೆ ಬಗ್ಗೆ ಯಾವುದೇ ಪ್ರಸ್ತಾಪ ಇರಲಿಲ್ಲ ಎಂದು ಅಸಮಾಧಾನ ಹೊರಹಾಕಿದ್ದಾರೆ.