ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ) ಹಗರಣದ ತನಿಖಾಧಿಕಾರಿ ಬದಲಾಯಿಸುವಂತೆ ನಾನು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸುತ್ತೇನೆ ಎಂದು ದೂರುದಾರ ಸ್ನೇಹಮಯಿ ಕೃಷ್ಣ ತಿಳಿಸಿದ್ದಾರೆ.
ಮೂಡಾ ಹಗರಣ ಪ್ರಕರಣದಲ್ಲಿ ಜನ ಪ್ರತಿನಿಧಿ ನ್ಯಾಯಾಲಯದ ಆದೇಶದಂತೆ ಗುರುವಾರ ಮೈಸೂರು ಲೋಕಾಯುಕ್ತರು ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಸಬೇಕಿದೆ. ಈ ವರದಿಯ ಅಂಶಗಳು ಖುದ್ದು ಸಿಎಂ ಸಿದ್ದರಾಮಯ್ಯ ಅವರ ಮೇಲೆಯೇ ಪ್ರಭಾವ ಬೀರುವ ಸಾಧ್ಯತೆ ಇದೆ ಎನ್ನಲಾಗಿದೆ.
ಈ ಕುರಿತು ಪ್ರತಿಕ್ರಿಯಿಸಿದ ದೂರದಾರ ಸ್ನೇಹಮಯಿ ಕೃಷ್ಣ, ಲೋಕಾಯುಕ್ತ ಗುರುವಾರ ಕೂಡ ಅಂತಿಮ ವರದಿ ಸಲ್ಲಿಸುವುದು ಅನುಮಾನವಿದೆ. ಅವರು ಮತ್ತೆ ಸಮಯವನ್ನು ಕೇಳುತ್ತಾರೆ. ನನಗೆ ಲೋಕಾಯುಕ್ತ ಎಸ್ಪಿ ಬಗ್ಗೆ ಬಹಳಷ್ಟು ಅನುಮಾನವಿದ್ದು ತನಿಖಾಧಿಕಾರಿ ಬದಲಾಯಿಸುವಂತೆ ನ್ಯಾಯಾಲಯಕ್ಕೆ ಅರ್ಜಿ ಹಾಕುತ್ತೇನೆ ಎಂದಿದ್ದಾರೆ.