ಬೆಂಗಳೂರು: ಮದುವೆಯ ಸಂಭ್ರಮದಲ್ಲಿದ್ದ ರಿಯಲ್ ಎಸ್ಟೇಟ್ ಉದ್ಯಮಿಯೊಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನ ಬಿಜಿಎಸ್ ಲೇಔಟ್ನ ನಿರ್ಮಾಣ ಹಂತದ ಕಟ್ಟಡದಲ್ಲಿ ನಡೆದಿದೆ. ಲೋಕನಾಥ್ ಸಿಂಗ್ (37) ಕೊಲೆಯಾಗಿರುವ ಉದ್ಯಮಿ ಎಂದು ಗುರುತಿಸಲಾಗಿದೆ. ಈ ತಿಂಗಳಲ್ಲಿ ಲೋಕನಾಥ್ ಗೆ ಮದುವೆ ನಿಶ್ಚಯವಾಗಿತ್ತು. ಆದರೆ ಇದೀಗ ದುಷ್ಕರ್ಮಿಗಳ ಕೈಯಿಂದ ಬರ್ಬರವಾಗಿ ಕೊಲೆಯಾಗಿದ್ದು, ಲೋಕನಾಥ್ ಗನ್ಮ್ಯಾನ್ ನಾಪತ್ತೆಯಾಗಿದ್ದ. ನಂತರ ಪೊಲೀಸ್ ಠಾಣೆಯಲ್ಲಿ ಪ್ರತ್ಯಕ್ಷನಾಗಿದ್ದಾನೆ. ಸದ್ಯ ಪೊಲೀಸರು ಈತನನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ.
