LIVE TV ಸ್ಥಳೀಯಅಪರಾಧರಾಜ್ಯದೇಶವಿದೇಶಿವ್ಯವಹಾರಜೀವನಶೈಲಿಕ್ರೀಡೆಉದ್ಯೋಗಸಿನಿಮಾಜ್ಯೋತಿಷ್ಯ

ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ ಕೆ –ಸೆಟ್ ವೇಳಾಪಟ್ಟಿ ಬಿಡುಗಡೆ.!

ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ ಕೆ –ಸೆಟ್ ವೇಳಾಪಟ್ಟಿ ಬಿಡುಗಡೆ.!

 ಬೆಂಗಳೂರು: 2026 ನೇ ಸಾಲಿನ ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ ಕೆ -ಸೆಟ್ ಗೆ ಅರ್ಜಿ ಆಹ್ವಾನಿಸಲಾಗಿದ್ದು, ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ವೇಳಾಪಟ್ಟಿ ಬಿಡುಗಡೆ ಮಾಡಲಾಗಿದೆ.

ಸೆಪ್ಟೆಂಬರ್ 5 ರ ವರೆಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಅರ್ಜಿ ಶುಲ್ಕ ಪಾವತಿಸಲು ಸೆಪ್ಟಂಬರ್ 6 ಕೊನೆಯ ದಿನವಾಗಿದ್ದು, ಅಕ್ಟೋಬರ್ 1ರಂದು ಪ್ರವೇಶ ಪತ್ರ ಬಿಡುಗಡೆ ಮಾಡಲಾಗುವುದು. ಅಕ್ಟೋಬರ್ 10ರಂದು ಪರೀಕ್ಷೆ ದಿನಾಂಕ ನಿಗದಿಪಡಿಸಲಾಗಿದೆ.

ಯುಜಿಸಿಯಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯ, ಉನ್ನತ ಶಿಕ್ಷಣ ಸಂಸ್ಥೆಯಿಂದ ಸ್ನಾತಕೋತ್ತರ ಪದವಿ ಅಥವಾ ತತ್ಸಮಾನ ಪರೀಕ್ಷೆಗಳಲ್ಲಿ ಶೇಕಡ 55 ರಷ್ಟು ಅಂಕ ಪಡೆದಿರಬೇಕು ಎನ್ನುವ ಅರ್ಹತೆ ನಿಗದಿಪಡಿಸಲಾಗಿದೆ. ಸ್ನಾತಕೋತ್ತರ ಪದವಿಯಲ್ಲಿ ಅಧ್ಯಯನ ಮಾಡಿದ ವಿಷಯದಲ್ಲಿ ಮಾತ್ರ ಅಭ್ಯರ್ಥಿಗಳು ಕೆ -ಸೆಟ್ ಪರೀಕ್ಷೆ ತೆಗೆದುಕೊಳ್ಳಬೇಕು. ಸಾಮಾನ್ಯ ವರ್ಗದ ಅಭ್ಯರ್ಥಿಗಳ ಹೊರತುಪಡಿಸಿ ಮೀಸಲು ಕೋರಿದ ಅಭ್ಯರ್ಥಿಗಳು ಆನ್ಲೈನ್ ಅರ್ಜಿ ಸಲ್ಲಿಕೆ ವೇಳೆ ಸ್ಪಷ್ಟವಾಗಿ ನಮೂದಿಸಬೇಕು ಚಾಲ್ತಿಯಲ್ಲಿರುವ ಪ್ರಮಾಣ ಪತ್ರದ ಆರ್.ಡಿ. ಸಂಖ್ಯೆಯನ್ನು ನಮೂದಿಸಬೇಕು ಎಂದು ಹೇಳಲಾಗಿದೆ.

ಅಭ್ಯರ್ಥಿಗಳಿಗೆ ಯಾವುದೇ ವಯೋಮಿತಿ ಇರುವುದಿಲ್ಲ. ಈಗಾಗಲೇ ಕೆ-ಸೆಟ್ ಪರೀಕ್ಷೆಯಲ್ಲಿ ಯಾವುದೇ ಒಂದು ವಿಷಯದಲ್ಲಿ ಅರ್ಹತೆ ಪಡೆದುಕೊಂಡ ಅಭ್ಯರ್ಥಿ ಮುಂಬರುವ ಕೆ -ಸೆಟ್ ಪರೀಕ್ಷೆಯಲ್ಲಿ ಅದೇ ವಿಷಯದಲ್ಲಿ ಅರ್ಜಿ ಸಲ್ಲಿಸುವಂತಿಲ್ಲ ಎಂದು ತಿಳಿಸಲಾಗಿದೆ.

Author
Bcsuddi - Basavaraj S
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರತ್ಯಕ್ಷವಾಗಿ ಪರೋಕ್ಷವಾಗಿ ಮಾಟಮಂತ್ರದಂತಹ ಸಮಸ್ಯೆಗೆ ಒಳಗಾಗಿದ್ದರೆ ಶಕ್ತಿಶಾಲಿ ಬೇರಿನಿಂದ ಸರಳ ಪ್ರಯೋಗ ಮಾಡಿ ಪರಿಹಾರ ಸಿಗುತ್ತದೆ!ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ ಕೆ –ಸೆಟ್ ವೇಳಾಪಟ್ಟಿ ಬಿಡುಗಡೆ.!ಚಿತ್ರದುರ್ಗ: ಇಂದು ಆ. 11ರಂದು ಸಿಎಂ ಜೊತೆ ಸರ್ಕಾರಿ ನೌಕರರ ಸಂವಾದ.!ಕ್ಯಾರಿ ಬ್ಯಾಗ್‌ಗೆ ಹೆಚ್ಚುವರಿ ಶುಲ್ಕ ವಿಧಿಸಿದ ಜುಡಿಯೊ ಮಳಿಗೆಗೆ ₹30,000 ದಂಡ.!ಯಾಂತ್ರಿಕ ಬದುಕಿಗೆ ಕಲೆ, ಸಾಹಿತ್ಯ, ಸಂಗೀತ ಮನಸ್ಸಿಗೆ ನೆಮ್ಮದಿ.!ಬಹುರಾಷ್ಟ್ರೀಯ ಕಂಪನಿಗಳನ್ನು ಭಾರತದಿಂದ ತೊಲಗಿಸಿ: ಪ್ರತಿಭಟನೆ.!11-08-2026 ದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ-ಅಕ್ಕಮಹಾದೇವಿ  ಅವರ ವಚನಈ 3 ಶತ್ರುಗಳು ನಿಮ್ಮ ಮನೆಯಲ್ಲಿದ್ದಾರೆ, ಸಮಯಕ್ಕೆ ಸರಿಯಾಗಿ ಗುರುತಿಸದಿದ್ರೆ ಲೈಫೇ ಬರ್ಬಾದ್‌ ಆಗುತ್ತೆ!ಕನ್ನಡ ಮಾಧ್ಯಮದಲ್ಲಿ ಓದಿದವರು ದಡ್ಡರಲ್ಲ : ಡಾ.ಎಲ್.ಪಾಲಾಕ್ಷಯ್ಯ