LIVE TV ಸ್ಥಳೀಯಅಪರಾಧರಾಜ್ಯದೇಶವಿದೇಶಿವ್ಯವಹಾರಜೀವನಶೈಲಿಕ್ರೀಡೆಉದ್ಯೋಗಸಿನಿಮಾಜ್ಯೋತಿಷ್ಯ

ಬ್ಯಾಂಕ್ ಆಫ್ ಬರೋಡಾದಲ್ಲಿ 419 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

:ಬ್ಯಾಂಕ್ ಆಫ್ ಬರೋಡಾ ತನ್ನ ವಿವಿಧ ಶಾಖೆಗಳು ಮತ್ತು ಇಲಾಖೆಗಳಲ್ಲಿರುವ ಖಾಲಿ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದೆ.  ಹಿರಿಯ ವ್ಯವಸ್ಥಾಪಕ, ಉಪ ವ್ಯವಸ್ಥಾಪಕ, ಸಹಾಯಕ ವ್ಯವಸ್ಥಾಪಕ ಮತ್ತು ಸಹಾಯಕ ಉಪಾಧ್ಯಕ್ಷ ಸೇರಿದಂತೆ ಒಟ್ಟು 419 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಅರ್ಹ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಸಂಬಂಧಿತ ವಿಭಾಗದಲ್ಲಿ ಪದವಿ ಅಥವಾ MBA, PGDM, CA, CFA, CMA ಮುಂತಾದ ವೃತ್ತಿಪರ ಅರ್ಹತೆಗಳನ್ನು ಹೊಂದಿರಬೇಕು. ಜೊತೆಗೆ, ಅಧಿಸೂಚನೆಯಲ್ಲಿ ಸೂಚಿಸಿದಂತೆ ಸಂಬಂಧಿತ ಕ್ಷೇತ್ರದಲ್ಲಿ ಅನುಭವವೂ ಅಗತ್ಯವಾಗಿದೆ. ಹುದ್ದೆಗಳ ಪ್ರಕಾರ ವಯೋಮಿತಿ 22 ರಿಂದ 40 ವರ್ಷಗಳ ನಡುವೆ ನಿಗದಿಪಡಿಸಲಾಗಿದೆ.

ಸರಕಾರದ ನಿಯಮಗಳಂತೆ ಎಸ್‌ಸಿ ಮತ್ತು ಎಸ್‌ಟಿ ಅಭ್ಯರ್ಥಿಗಳಿಗೆ ಐದು ವರ್ಷ, ಒಬಿಸಿ ಅಭ್ಯರ್ಥಿಗಳಿಗೆ ಮೂರು ವರ್ಷ ಹಾಗೂ ಪಿಎಚ್‌ಡಿ ಪಡೆದವರಿಗೆ ಹತ್ತು ವರ್ಷಗಳ ವಯೋಮಿತಿ ಸಡಿಲಿಕೆ ನೀಡಲಾಗಿದೆ. ಆಸಕ್ತರು ಫೆಬ್ರವರಿ 6 ರಿಂದ ಫೆಬ್ರವರಿ 26ರವರೆಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು . ಅರ್ಜಿ ಶುಲ್ಕವಾಗಿ ಸಾಮಾನ್ಯ, ಒಬಿಸಿ ಮತ್ತು ಇಡಬ್ಲ್ಯೂಎಸ್ ಅಭ್ಯರ್ಥಿಗಳು ರೂ. 850 ಪಾವತಿಸಬೇಕಾಗಿದ್ದು, ಎಸ್‌ಸಿ, ಎಸ್‌ಟಿ, ಪಿಡಬ್ಲ್ಯೂಡಿ, ಇಎಸ್‌ಎಂ, ಡಿಇಎಸ್‌ಎಂ ಹಾಗೂ ಮಹಿಳಾ ಅಭ್ಯರ್ಥಿಗಳಿಗೆ ರೂ. 175 ಮಾತ್ರ ನಿಗದಿಯಾಗಿದೆ. ಈ ನೇಮಕಾತಿಯಲ್ಲಿ ಯಾವುದೇ ಲಿಖಿತ ಪರೀಕ್ಷೆ ಇರದೆ, ಅಭ್ಯರ್ಥಿಗಳ ಆಯ್ಕೆ ಸಂದರ್ಶನದ ಆಧಾರದ ಮೇಲೆ ನಡೆಯಲಿದೆ. ಆಸಕ್ತ ಅಭ್ಯರ್ಥಿಗಳು ಈ ಕೆಳಗಿನ ವೆಬ್ ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು https://bankofbaroda.bank.in

Author
Bcsuddi - Basavaraj S
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕೇವಲ ಅರಳಿ ಮರವನ್ನು ಮುಟ್ಟುತ್ತಾ ಈ ಚಿಕ್ಕ ಮಂತ್ರ ಹೇಳಿದರೆ ಯಾವುದೇ ಇಚ್ಛೆ ಇದ್ದರೂ ಈಡೇರುತ್ತದೆ..!ಏಳು ಜನ ಹಿರಿಯ ಐಎಎಸ್ (IAS) ಅಧಿಕಾರಿಗಳನ್ನು ವರ್ಗಾವಣೆ.! ಹೆಚ್ಚುವರಿ ಜವಾಬ್ದಾರಿಚಿತ್ರದುರ್ಗ: ನಾಳೆ  ಜಿಟಿಟಿಸಿ: ಜುಲೈ 22ರಂದು ಉದ್ಯೋಗ ಮೇಳಕ್ರೀಡಾಪಟುಗಳ ಪ್ರೋತ್ಸಾಹಧನ, ವಿವಿಧ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 21-07-2026ವಚನ.: --ಸಿದ್ಧರಾಮೇಶ್ವರಒತ್ತಡದ ಬದುಕಿನಲ್ಲಿ ಆರೋಗ್ಯದ ಕಡೆಗೆ ಗಮನಹರಿಸಿ:  -ಜಿಲ್ಲಾ ನ್ಯಾಯಾಧೀಶ ಜಿ.ಡಿ.ಮಹಾವರ್ಕರ್ಈ ಕಾರಣಕ್ಕೆ ಗಣಿ ಇಲಾಖೆಯಲ್ಲಿ ಮೇಜರ್ ಸರ್ಜರಿ ಶೇ.80ರಷ್ಟು ಸಿಬ್ಬಂದಿ ವರ್ಗಾವಣೆ.!ದೃಷ್ಟಿ ನರಘೋಷ ಮಹಾನಿವಾರಣ ಯಂತ್ರದ ಮಹತ್ವವೇನು ಯಂತ್ರದಿಂದ ನರ ದೃಷ್ಟಿ ದೋಷ ಶತ್ರು ದೃಷ್ಟಿ ದೋಷ ಹೇಗೆ ಪರಿಹಾರ!?ಇಂದಿನಿಂದ ಸಂಸತ್ತಿನ ಮುಂಗಾರು ಅಧಿವೇಶನ ವಿಪಕ್ಷಗಳ ಲೆಕ್ಕಾಚಾರ ಏನು.?