LIVE TV ಸ್ಥಳೀಯಅಪರಾಧರಾಜ್ಯದೇಶವಿದೇಶಿವ್ಯವಹಾರಜೀವನಶೈಲಿಕ್ರೀಡೆಉದ್ಯೋಗಸಿನಿಮಾಜ್ಯೋತಿಷ್ಯ

ಚಿತ್ರದುರ್ಗ: ಇಂದು ಆ. 11ರಂದು ಸಿಎಂ ಜೊತೆ ಸರ್ಕಾರಿ ನೌಕರರ ಸಂವಾದ.!

ಚಿತ್ರದುರ್ಗ: ಇಂದು ಆ. 11ರಂದು ಸಿಎಂ ಜೊತೆ ಸರ್ಕಾರಿ ನೌಕರರ ಸಂವಾದ.!

 

ಚಿತ್ರದುರ್ಗ: ರಾಜ್ಯದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಜಿಲ್ಲಾ, ತಾಲ್ಲೂಕು ಹಾಗೂ ಹೋಬಳಿ ಮಟ್ಟದ ಸರ್ಕಾರಿ ನೌಕರರೊಂದಿಗೆ ಇದೇ ಆಗಸ್ಟ್ 11ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ರವರೆಗೆ ಆನ್‍ಲೈನ್ ಮೂಲಕ ನೇರ ಸಂವಾದ ನಡೆಸಲಿದ್ದಾರೆ.

ಈ ಸಂವಾದಕ್ಕಾಗಿ ಜಿಲ್ಲೆಯ ವಿವಿಧೆಡೆ ಸ್ಥಳಗಳನ್ನು ಗುರುತಿಸಲಾಗಿದೆ. ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಚಿತ್ರದುರ್ಗ ತಾಲ್ಲೂಕು ವ್ಯಾಪ್ತಿಯ ಅಧಿಕಾರಿಗಳು ತಮ್ಮ ಸಿಬ್ಬಂದಿಯೊಂದಿಗೆ ಜಿಲ್ಲಾ ಕೇಂದ್ರ ಚಿತ್ರದುರ್ಗ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಬೆಳಿಗ್ಗೆ 10.30ಕ್ಕೆ ಹಾಜರಾಗಬೇಕು. ಚಿತ್ರದುರ್ಗ ತಾಲ್ಲೂಕಿನ ಭರಮಸಾಗರದ ಹೋಬಳಿ ಮಟ್ಟದ ಸರ್ಕಾರಿ ನೌಕರರು ಬಸವೇಶ್ವರ ಕಲ್ಯಾಣ ಮಂಟಪ, ಹಿರೇಗುಂಟನೂರು ಹೋಬಳಿಯವರು ಬೊಮ್ಮೇನಹಳ್ಳಿಯ ಶ್ರೀ ಯೋಗಿ ನಾರಾಯಣ ಕಲ್ಯಾಣ ಮಂಟಪ ಹಾಗೂ ತುರುವನೂರು ಹೋಬಳಿಯವರು ತುರುವನೂರಿನ ಡಿಗ್ರಿ ಕಾಲೇಜಿನ ಹೊಸ ಕಟ್ಟಡದಲ್ಲಿ ಹಾಜರಾಗಬೇಕು. 

ಹಿರಿಯೂರಿನಲ್ಲಿ ನಗರಸಭೆ ಸಭಾಂಗಣ (ತಾಲ್ಲೂಕು ಕೇಂದ್ರ), ಧರ್ಮಪುರ ಹಾಗೂ ಐಮಂಗಲದ ಗ್ರಾಮ ಪಂಚಾಯತಿ ಆವರಣ ಮತ್ತು ಜೆ.ಜಿ. ಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವ್ಯವಸ್ಥೆ ಮಾಡಲಾಗಿದೆ. ಹೊಸದುರ್ಗದಲ್ಲಿ ಹಳೇ ನ್ಯಾಯಾಲಯ (ತಾಲ್ಲೂಕು ಕೇಂದ್ರ), ಮಾಡದಕೆರೆಯ ಶ್ರೀ ಹಾಲುರಾಮೇಶ್ವರ ಸಭಾ ಭವನ, ಶ್ರೀರಾಂಪುರದ ಡಾ.ಬಿ.ಆರ್. ಅಂಬೇಡ್ಕರ್ ಭವನ ಹಾಗೂ ಮತ್ತೋಡಿನ ಶ್ರೀ ಬನಶಂಕರಿ ಕಲ್ಯಾಣಿ ಮಂಟಪ ನಿಗದಿಪಡಿಸಲಾಗಿದೆ.

ಹೊಳಲ್ಕೆರೆಯಲ್ಲಿ ಶಿವಮೊಗ್ಗ ರಸ್ತೆಯ ವಾಲ್ಮೀಕಿ ಸಮುದಾಯ ಭವನ (ತಾಲ್ಲೂಕು ಕೇಂದ್ರ), ಚಿಕ್ಕಜಾಜೂರು ಸಮುದಾಯ ಭವನ, ರಾಮಗಿರಿ ಹೋಬಳಿಯವರು ಮಲ್ಲಾಡಿಹಳ್ಳಿಯ ಅನಾಥ ಸೇವಾಶ್ರಮ ಸಮುದಾಯ ಭವನ ಹಾಗೂ ತಾಳ್ಯ ಹೋಬಳಿಯವರು ಹೊರಕೆರೆದೇವರಪುರ ಯಾತ್ರಿ ನಿವಾಸದಲ್ಲಿ ಸಂವಾದಕ್ಕೆ ಅವಕಾಶ ಕಲ್ಪಿಸಲಾಗಿದೆ.

 ಮೊಳಕಾಲ್ಮೂರಿನಲ್ಲಿ ತಾಲ್ಲೂಕು ಕಚೇರಿಯ ಕೆ-ಸ್ವಾನ್ ಕೊಠಡಿ (ತಾಲ್ಲೂಕು ಕೇಂದ್ರ) ಹಾಗೂ ರಾಂಪುರದ ಎನ್.ಪಿ.ಎಸ್.ಆರ್. ಪ್ರೌಢಶಾಲೆಯನ್ನು ಗುರುತಿಸಲಾಗಿದೆ. ಚಳ್ಳಕೆರೆಯಲ್ಲಿ ಸರ್ಕಾರಿ ನೌಕರರ ಭವನ (ತಾಲ್ಲೂಕು ಕೇಂದ್ರ), ನಾಯಕನಹಟ್ಟಿ ಒಳಮಠದ ಸಮುದಾಯ ಭವನ, ಪರಶುರಾಂಪುರದ ಶ್ರೀ ವಾಸವಿ ಕನ್ವೆನ್ಷನ್ ಹಾಲ್ ಹಾಗೂ ತಳಕುವಿನ ಜಾಮಿಯಾ ಸಮುದಾಯ ಭವನ ನಿಗದಿಗೊಳಿಸಲಾಗಿದೆ.

ನಿಗಧಿಪಡಿಸಿರುವ ಸಮಯಕ್ಕೆ ಸರಿಯಾಗಿ ಜಿಲ್ಲಾ ಕೇಂದ್ರ, ತಾಲ್ಲೂಕುಕೇಂದ್ರ, ಹೋಬಳಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಅಧಿಕಾರಿ, ಸಿಬ್ಬಂದಿಗಳನ್ನು ಗುರುತಿಸಲಾಗಿರುವ ಸ್ಥಳಗಳಲ್ಲಿ ಕಡ್ಡಾಯವಾಗಿ ಹಾಜರಾಗಬೇಕು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಿಳಿಸಿದ್ದಾರೆ.

Author
Bcsuddi - Basavaraj S
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರತ್ಯಕ್ಷವಾಗಿ ಪರೋಕ್ಷವಾಗಿ ಮಾಟಮಂತ್ರದಂತಹ ಸಮಸ್ಯೆಗೆ ಒಳಗಾಗಿದ್ದರೆ ಶಕ್ತಿಶಾಲಿ ಬೇರಿನಿಂದ ಸರಳ ಪ್ರಯೋಗ ಮಾಡಿ ಪರಿಹಾರ ಸಿಗುತ್ತದೆ!ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ ಕೆ –ಸೆಟ್ ವೇಳಾಪಟ್ಟಿ ಬಿಡುಗಡೆ.!ಚಿತ್ರದುರ್ಗ: ಇಂದು ಆ. 11ರಂದು ಸಿಎಂ ಜೊತೆ ಸರ್ಕಾರಿ ನೌಕರರ ಸಂವಾದ.!ಕ್ಯಾರಿ ಬ್ಯಾಗ್‌ಗೆ ಹೆಚ್ಚುವರಿ ಶುಲ್ಕ ವಿಧಿಸಿದ ಜುಡಿಯೊ ಮಳಿಗೆಗೆ ₹30,000 ದಂಡ.!ಯಾಂತ್ರಿಕ ಬದುಕಿಗೆ ಕಲೆ, ಸಾಹಿತ್ಯ, ಸಂಗೀತ ಮನಸ್ಸಿಗೆ ನೆಮ್ಮದಿ.!ಬಹುರಾಷ್ಟ್ರೀಯ ಕಂಪನಿಗಳನ್ನು ಭಾರತದಿಂದ ತೊಲಗಿಸಿ: ಪ್ರತಿಭಟನೆ.!11-08-2026 ದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ-ಅಕ್ಕಮಹಾದೇವಿ  ಅವರ ವಚನಈ 3 ಶತ್ರುಗಳು ನಿಮ್ಮ ಮನೆಯಲ್ಲಿದ್ದಾರೆ, ಸಮಯಕ್ಕೆ ಸರಿಯಾಗಿ ಗುರುತಿಸದಿದ್ರೆ ಲೈಫೇ ಬರ್ಬಾದ್‌ ಆಗುತ್ತೆ!ಕನ್ನಡ ಮಾಧ್ಯಮದಲ್ಲಿ ಓದಿದವರು ದಡ್ಡರಲ್ಲ : ಡಾ.ಎಲ್.ಪಾಲಾಕ್ಷಯ್ಯ