ಬೆಂಗಳೂರು: ಕೆಪಿಎಸ್ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅವರಿಗೆ ಜಾರಿ ನಿರ್ದೇಶನಾಲಯ (ಇಡಿ) ಶಾಕ್ ನೀಡಿದೆ. ಇಡಿ ಅಧಿಕಾರಿಗಳು ಇಂದುಬೆಳಗ್ಗೆ ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ಅವರ ನಿವಾಸ ಸೇರಿದಂತೆ ಒಟ್ಟು 13 ಸ್ಥಳಗಳಲ್ಲಿ ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ.
ಕೆಪಿಎಸ್ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅವರಿಗೆ ಸಂಬಂಧಿಸಿದ ಆಸ್ತಿ, ಹಣಕಾಸು ವ್ಯವಹಾರಗಳು ಹಾಗೂ ಇತರ ದಾಖಲೆಗಳ ಕುರಿತು ಇಡಿ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ನಿವಾಸ ಸೇರಿದಂತೆ ರಾಜ್ಯದ ವಿವಿಧೆಡೆ ಒಟ್ಟು 13 ಸ್ಥಳಗಳಲ್ಲಿ ಅಧಿಕಾರಿಗಳು ಶೋಧ ಕಾರ್ಯಾಚರಣೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.