ಗದಗ: ಕನ್ನಡದ 'ಮಂಗಳ ಗೌರಿ ಮದುವೆ' ಖ್ಯಾತಿಯ ಹಿರಿಯ ಕಿರುತೆರೆ ನಟ ಹಾಗೂ ರಂಗಭೂಮಿ ಕಲಾವಿದ ವಿಜಯಕುಮಾರ್ ಜಿತೂರಿ ನಿಧನರಾಗಿದ್ದಾರೆ.
ಹಲವು ದಿನಗಳಿಂದ ತೀವ್ರ ಆರೋಗ್ಯ ಸಮಸ್ಯೆ ಹಾಗೂ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಅವರು, ಗದಗದ ಬೆಟಗೇರಿಯಲ್ಲಿ ತಮ್ಮ ಸ್ವಗೃಹದಲ್ಲಿಯೇ ನಿಧನರಾಗಿದ್ದಾರೆ.
ಅವರು ಕೇವಲ ನಟ ಮಾತ್ರ ಅಲ್ಲ ಗಾಯಕ ಕೂಡ ಹೌದು. ಕಲಾ ಕ್ಷೇತ್ರಕ್ಕೆ ಸಾಕಷ್ಟು ಕೊಡುಗೆ ನೀಡಿದ್ದಾರೆ. ಇವರ ನಿಧನದಿಂದ ಕನ್ನಡ ಮನರಂಜನಾ ಲೋಕ ಮತ್ತೊಬ್ಬ ಪ್ರತಿಭಾವಂತ ಕಲಾವಿದನನ್ನು ಕಳೆದುಕೊಂಡಂತಾಗಿದೆ.