ನಿತ್ಯ ನಿಮ್ಮ ಬಿಸಿ ಸುದ್ದಿಯಲ್ಲಿ 12 ನೇ ಶತಮಾನದಲ್ಲಿ ಶರಣರು ರಚಿಸಿದ ವಚನಗಳನ್ನು ನಿಮ್ಮಗಳ ಅವಗಾಹನೆಗೆ
ವಚನ:
ಕಾಯದ ಸುಳುಹುಳ್ಳನ್ನಕ್ಕ ಕರ್ಮಪೂಜೆ ಬೇಕೆಂಬರು.
ಜೀವನ ಸಂಚಾರವುಳ್ಳನಕ್ಕ ಜ್ಞಾನವನರಿಯಬೇಕೆಂಬರು.
ಜ್ಞಾನ ಧ್ಯಾನಿಸಿ ಕಾಬಲ್ಲಿ, ಕಾಯದ ಕರ್ಮದಿಂದ ಮುಕ್ತಿಯೋ ?
ಜೀವನ ಜ್ಞಾನದಿಂದ ಮುಕ್ತಿಯೋ? ಜ್ಞಾನ ಧ್ಯಾನದಿಂದ ಮುಕ್ತಿಯೋ ?
ಧ್ಯಾನಿಸಿ ಕಾಲ ಕುರುಹ ಎನಗೊಂದುಬಾರಿ ತೋರಾ.
ಕೈಯುಳಿ ಕತ್ತಿ ಅಡಿಗೂಂಟಕ್ಕಡಿಯಾಗಬೇಡ,
ಅರಿ ನಿಜಾ[ತ್ಮಾ]ರಾಮ ರಾಮನಾ.
-ಮಾದಾರ ಚೆನ್ನಯ್ಯ