LIVE TV ಸ್ಥಳೀಯಅಪರಾಧರಾಜ್ಯದೇಶವಿದೇಶಿವ್ಯವಹಾರಜೀವನಶೈಲಿಕ್ರೀಡೆಉದ್ಯೋಗಸಿನಿಮಾಜ್ಯೋತಿಷ್ಯ

ರೈಲ್ವೆ ಇಲಾಖೆಯಲ್ಲಿ 22,000 ಖಾಲಿ ಹುದ್ದೆಗಳ ಭರ್ಜರಿ ನೇಮಕಾತಿ

ರೈಲ್ವೆ ಇಲಾಖೆ ವ್ಯಾಪ್ತಿಯಲ್ಲಿ ಖಾಲಿ ಇರುವ ಬರೋಬ್ಬರಿ 22 ಸಾವಿರಕ್ಕೂ ಅಧಿಕ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ.

ಭಾರತೀಯ ರೈಲ್ವೆ ಸಚಿವಾಲಯದ ಅಧೀನದಲ್ಲಿರುವ ರೈಲ್ವೆ ನೇಮಕಾತಿ ಮಂಡಳಿಗಳು (RRB) ಲೆವೆಲ್-1 ಹುದ್ದೆಗಳ ಭರ್ತಿಗೆ ಕೇಂದ್ರಿತ ಉದ್ಯೋಗ ಅಧಿಸೂಚನೆ (CEN) ಸಂಖ್ಯೆ 09/2025 ಅನ್ನು ಇತ್ತೀಚೆಗೆ ಬಿಡುಗಡೆ ಮಾಡಿದೆ.

ಈ ಅಧಿಸೂಚನೆಯ ಮೂಲಕ ದೇಶಾದ್ಯಂತ ವಿವಿಧ ರೈಲ್ವೆ ವಲಯಗಳಲ್ಲಿ ಒಟ್ಟು ಸುಮಾರು 22,000 ಹುದ್ದೆಗಳ ನೇಮಕಾತಿ ಮಾಡಿಕೊಳ್ಳಲು ತೀರ್ಮಾನಿಸಲಾಗಿದೆ. ಏಳನೇ ವೇತನ ಆಯೋಗದ ಪೇ ಮ್ಯಾಟ್ರಿಕ್ಸ್ ಅಡಿಯಲ್ಲಿ ಈ ನೇಮಕಾತಿ ನಡೆಯುತ್ತದೆ ಎಂದು ಅಧಿಸೂಚನೆಯಲ್ಲಿ ಮಾಹಿತಿ ನೀಡಿಲಾಗಿದೆ.

ಜ.21ರಿಂದ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆ ಆಸಕ್ತ ಅಭ್ಯರ್ಥಿಗಳು ಈ ನೇಮಕಾತಿಗೆ ಅರ್ಜಿಗಳನ್ನು ಆನ್‌ಲೈನ್ ಮೂಲಕ ಸಲ್ಲಿಸಬೇಕಿದೆ. 2026ರ ಜನವರಿ 21ರಿಂದ ಅರ್ಜಿ ಸಲ್ಲಿಕೆ ಆರಂಭವಾಗುತ್ತದೆ. ಅರ್ಜಿ ಸಲ್ಲಿಕೆಗೆ ಫೆಬ್ರವರಿ 20ರವರೆಗೆ ಕಾಲಾವಕಾಶ ನೀಡಲಾಗಿದೆ. ಅಭ್ಯರ್ಥಿಗಳು http://www.rrbapply.gov.in ಅಧಿಕೃತ ವೆಬ್‌ಸೈಟ್ ಮೂಲಕ ಅರ್ಜಿ ಸಲ್ಲಿಸಲು ಕೂಡಲೇ ಅಗತ್ಯ ದಾಖಲೆಗಳನ್ನು ಸಿದ್ಧಪಡಿಸಿಟ್ಟುಕೊಳ್ಳಬೇಕಿದೆ.

ಮಾಸಿಕ ವೇತನ ರೈಲ್ವೆ ಇಲಾಖೆಯ ಸದರಿ ಹುದ್ದೆಗಳಿಗೆ ಅಗತ್ಯವಿರುವ ಶೈಕ್ಷಣಿಕ ಅರ್ಹತೆ ಮತ್ತು ವೈದ್ಯಕೀಯ ಮಾನದಂಡಗಳು ಸಂಬಂಧಿಸಿದಂತೆ ಸಂಪೂರ್ಣ ವಿವರಗಳನ್ನು ಅಧಿಕೃತ ಅಧಿಸೂಚನೆಯಲ್ಲಿ ನೀಡಲಾಗಿದೆ. ಲೆವೆಲ್-1 ರ ವಿವಿಧ ಹುದ್ದೆಗಳಿಗೆ ಆಯ್ಕೆ ನಡೆಯಲಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಮೂಲ ವೇತನವಾಗಿ ಮಾಸಿಕ 18,000 ರೂಪಾಯಿ ನಿಗದಿಪಡಿಸಲಾಗಿದೆ.

ಎಂದು ರೈಲ್ವೆ ಇಲಾಖೆ ಮಾಹಿತಿ ನೀಡಿದೆ. ಅಭ್ಯರ್ಥಿಗಳ ವಯೋಮಿತಿ ಅರ್ಜಿ ಸಲ್ಲಿಸಲು ಇಚ್ಛಿಸುವ ಅಭ್ಯರ್ಥಿಗಳ ವಯೋಮಿತಿ 2026ರ ಜನವರಿ 1ರ ವೇಳೆಗೆ ಕನಿಷ್ಠ 18 ವರ್ಷ ಮತ್ತು ಗರಿಷ್ಠ 33 ವರ್ಷದೊಳಗೆ ಇರಬೇಕು. ಅಂಥವರು ಮಾತ್ರವೇ ಅರ್ಜಿ ಸಲ್ಲಿಸಬಹುದಾಗಿದೆ. ಜಾತಿ ಮೀಸಲಾತಿ ನಿಯಮಾನುಸಾರ ಆಯಾ ವರ್ಗದ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಅನ್ವಯಿಸಲಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಬೇಕು.

Author
Bcsuddi - Basavaraj S
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕೇವಲ ಅರಳಿ ಮರವನ್ನು ಮುಟ್ಟುತ್ತಾ ಈ ಚಿಕ್ಕ ಮಂತ್ರ ಹೇಳಿದರೆ ಯಾವುದೇ ಇಚ್ಛೆ ಇದ್ದರೂ ಈಡೇರುತ್ತದೆ..!ಏಳು ಜನ ಹಿರಿಯ ಐಎಎಸ್ (IAS) ಅಧಿಕಾರಿಗಳನ್ನು ವರ್ಗಾವಣೆ.! ಹೆಚ್ಚುವರಿ ಜವಾಬ್ದಾರಿಚಿತ್ರದುರ್ಗ: ನಾಳೆ  ಜಿಟಿಟಿಸಿ: ಜುಲೈ 22ರಂದು ಉದ್ಯೋಗ ಮೇಳಕ್ರೀಡಾಪಟುಗಳ ಪ್ರೋತ್ಸಾಹಧನ, ವಿವಿಧ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 21-07-2026ವಚನ.: --ಸಿದ್ಧರಾಮೇಶ್ವರಒತ್ತಡದ ಬದುಕಿನಲ್ಲಿ ಆರೋಗ್ಯದ ಕಡೆಗೆ ಗಮನಹರಿಸಿ:  -ಜಿಲ್ಲಾ ನ್ಯಾಯಾಧೀಶ ಜಿ.ಡಿ.ಮಹಾವರ್ಕರ್ಈ ಕಾರಣಕ್ಕೆ ಗಣಿ ಇಲಾಖೆಯಲ್ಲಿ ಮೇಜರ್ ಸರ್ಜರಿ ಶೇ.80ರಷ್ಟು ಸಿಬ್ಬಂದಿ ವರ್ಗಾವಣೆ.!ದೃಷ್ಟಿ ನರಘೋಷ ಮಹಾನಿವಾರಣ ಯಂತ್ರದ ಮಹತ್ವವೇನು ಯಂತ್ರದಿಂದ ನರ ದೃಷ್ಟಿ ದೋಷ ಶತ್ರು ದೃಷ್ಟಿ ದೋಷ ಹೇಗೆ ಪರಿಹಾರ!?ಇಂದಿನಿಂದ ಸಂಸತ್ತಿನ ಮುಂಗಾರು ಅಧಿವೇಶನ ವಿಪಕ್ಷಗಳ ಲೆಕ್ಕಾಚಾರ ಏನು.?