LIVE TV ಸ್ಥಳೀಯಅಪರಾಧರಾಜ್ಯದೇಶವಿದೇಶಿವ್ಯವಹಾರಜೀವನಶೈಲಿಕ್ರೀಡೆಉದ್ಯೋಗಸಿನಿಮಾಜ್ಯೋತಿಷ್ಯ

2028ರ ವಿಧಾನಸಭಾ ಚುನಾವಣೆಯಲ್ಲಿ ತಾವು ಸ್ಪರ್ಧಿಸುವುದಿಲ್ಲ..!

 

 

ಮಂಡ್ಯ: ಇಂದಿನ ರಾಜಕೀಯ ಕ್ಷೇತ್ರ ಸಂಪೂರ್ಣ ಕಲುಷಿತಗೊಂಡಿರುವುದರಿಂದ 2028ರ ವಿಧಾನಸಭಾ ಚುನಾವಣೆಯಲ್ಲಿ ತಾವು ಸ್ಪರ್ಧಿಸುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

ಚುನಾವಣೆಯಿಂದ ಹಿಂದೆ ಸರಿಯುವುದಾಗಿ ತಿಳಿಸಿದರೂ, ತಾವೇನೂ ಸಕ್ರಿಯ ರಾಜಕಾರಣದಿಂದ ದೂರ ಉಳಿಯುವುದಿಲ್ಲ; ಸದಾ ಜನರ ಕಷ್ಟ-ಸುಖಗಳಿಗೆ ಸ್ಪಂದಿಸುವ ಧ್ವನಿಯಾಗಿ ಸಕ್ರಿಯವಾಗಿ ಕೆಲಸ ಮಾಡುವುದಾಗಿ ಅವರು ನೆರೆದಿದ್ದ ಸಾರ್ವಜನಿಕರಿಗೆ ಭರವಸೆ ನೀಡಿದರು.

ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆಯಲ್ಲಿ ಮಾಜಿ ಸ್ಪೀಕರ್ ದಿವಂಗತ ಕೃಷ್ಣ ಅವರ 86ನೇ ಜನ್ಮದಿನದ ಅಂಗವಾಗಿ ಆಯೋಜಿಸಲಾಗಿದ್ದ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಸಿದ್ದರಾಮಯ್ಯ, ಇಂದಿನ ರಾಜಕೀಯ ವಾತಾವರಣದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು. "ನಾವು ಆರಂಭದಲ್ಲಿ ಚುನಾವಣೆಗೆ ಸ್ಪರ್ಧಿಸಿದಾಗ ಕ್ಷೇತ್ರದ ಜನರೇ ನಮಗೆ ಹಣ ಕೊಟ್ಟು, ಪ್ರೀತಿಯಿಂದ ಗೆಲ್ಲಿಸಿ ಕಳುಹಿಸುತ್ತಿದ್ದರು. ಆದರೆ, ಇಂದಿನ ದಿನಗಳಲ್ಲಿ ಚುನಾವಣೆಯಲ್ಲಿ ಸ್ಪರ್ಧಿಸಬೇಕಾದರೆ ನಾವೇ ಜನರಿಗೆ ದುಡ್ಡು ಕೊಡಬೇಕಾದ ಪರಿಸ್ಥಿತಿ ಬಂದೊದಗಿದೆ," ಎಂದು ಬೇಸರ ವ್ಯಕ್ತಪಡಿಸಿದರು.

ಪ್ರಸ್ತುತ ವ್ಯವಸ್ಥೆಯಲ್ಲಿ ಪ್ರಾಮಾಣಿಕ ರಾಜಕಾರಣಕ್ಕೆ ಯಾವುದೇ ಬೆಲೆ ಇಲ್ಲದಂತಾಗಿದೆ ಎಂದ ಸಿದ್ದರಾಮಯ್ಯ, ರಾಜಕೀಯದಲ್ಲಿ ಹಣಬಲ ಹೆಚ್ಚಾಗಿ ಮೌಲ್ಯಗಳು ಕುಸಿಯುತ್ತಿರುವುದೇ ತಾವು ಮುಂದಿನ ಚುನಾವಣಾ ರಾಜಕೀಯದಿಂದ ಹಿಂದೆ ಸರಿಯಲು ಮುಖ್ಯ ಕಾರಣ ಎಂದು ತಿಳಿಸಿದರು. ಭ್ರಷ್ಟಗೊಂಡಿರುವ ಈ ವ್ಯವಸ್ಥೆಯಲ್ಲಿ ಪ್ರಾಮಾಣಿಕವಾಗಿ ಮುಂದುವರಿಯುವುದು ಕಷ್ಟಕರವಾಗಿದೆ ಎಂಬುದು ಅವರ ಅಭಿಪ್ರಾಯವಾಗಿತ್ತು.

ಮಾಜಿ ಸ್ಪೀಕರ್ ದಿ. ಕೃಷ್ಣ ಅವರ ಕೊಡುಗೆಯನ್ನು ಸ್ಮರಿಸಿದ ಸಿದ್ದರಾಮಯ್ಯ, "ಕೃಷ್ಣ ಅವರು ಜನಪ್ರಿಯ ನಾಯಕರಾಗಿದ್ದರು. ಜನ ಬಯಸುತ್ತಿದ್ದರೂ ಸಹ, ಕಲುಷಿತಗೊಂಡ ರಾಜಕೀಯ ವ್ಯವಸ್ಥೆಯಿಂದ ಬೇಸತ್ತು ಅವರು ನಿವೃತ್ತಿ ಪಡೆದು ಸಕ್ರಿಯ ರಾಜಕಾರಣದಿಂದ ದೂರ ಉಳಿದಿದ್ದರು. ಇಂದು ಅವರು ನಮ್ಮೊಂದಿಗಿಲ್ಲದಿದ್ದರೂ, ಅವರು ಹಾಕಿ ಕೊಟ್ಟ ರಾಜಕೀಯ ಆದರ್ಶಗಳು ಮತ್ತು ಮೌಲ್ಯಗಳು ಎಂದೆಂದಿಗೂ ನಮಗೆ ದಾರಿದೀಪವಾಗಿರುತ್ತವೆ" ಎಂದು ನುಡಿದರು..

Author
Bcsuddi - Basavaraj S
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST