ನಿತ್ಯ ನಿಮ್ಮ ಬಿಸಿ ಸುದ್ದಿಯಲ್ಲಿ 12 ನೇ ಶತಮಾನದಲ್ಲಿ ಶರಣರು ರಚಿಸಿದ ವಚನಗಳನ್ನು ನಿಮ್ಮಗಳ ಅವಗಾಹನೆಗೆ
ವಚನ:
ಇರುಳ ನುಂಗಿತ್ತು, ಇರುಳಿಲ್ಲ; ಹಗಲ ನುಂಗಿತ್ತು ಹಗಲಿಲ್ಲ.
ಅರಿವ ನುಂಗಿತ್ತು ಅರಿವಿಲ್ಲ, ಮರಹ ನುಂಗಿತ್ತು ಮರಹಿಲ್ಲ.
ಕಾಯವ ನುಂಗಿತ್ತು ಕಾಯವಿಲ್ಲ, ಜೀವವ ನುಂಗಿತ್ತು ಜೀವವಿಲ್ಲ.
ಇವೆಲ್ಲವ ನುಂಗಿತ್ತು ಇದೇನಯ್ಯಾ, ಸಾವ ನುಂಗದು ಗುಹೇಶ್ವರಾ ?
-ಅಲ್ಲಮಪ್ರಭುದೇವರು