ಮುಂದಿನ ವಾರ ಸಚಿವ ಸಂಪುಟ ವಿಸ್ತರಣೆ ಜಿಲ್ಲೆಗೆ ಯಾರಿಗೆ ಸಿಗಬಹುದು.?
ಚಿತ್ರದುರ್ಗ: ಬಹುತೇಕ ಮುಂದಿನ ವಾರ ಸಚಿವ ಸಂಪುಟ ವಿಸ್ತರಣೆ ಆಗಬಹುದು. ಆಗ ಎಲ್ಲಾ ಸಚಿವರುಗಳು ಕೈ ಜೋಡಿಸಿ ಕೆಲಸ ಮಾಡಬೇಕಾಗುತ್ತದೆ.
ಒಟ್ಟಾಗಿ ಇಡೀ ರಾಜ್ಯದ ಬರ ಪರಿಸ್ಥಿತಿಯನ್ನು ಅವಲೋಕಿಸಬೇಕು ಎಂದು CM DK ಶಿವಕುಮಾರ್ ಹೇಳಿದ್ದಾರೆ. ಚಿತ್ರದುರ್ಗದಲ್ಲಿ ಶನಿವಾರ ನಡೆದ ದ ಬೆಂಗಳೂರು ಪ್ರಾದೇಶಿಕ ವಿಭಾಗ ಮಟ್ಟದ ಅಭಿವೃದ್ಧಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲನೆ ಸಭೆಯಲ್ಲಿ ಮಾತನಾಡಿದ ಅವರು, ಹಳ್ಳಿಗಳಲ್ಲಿ ರೈತರ ಬದುಕಿಗೆ ತೊಂದರೆ ಆಗದಂತೆ ಎಚ್ಚರ ವಹಿಸಬೇಕು. ಇದೇ ನಮ್ಮ ಮುಂದಿರುವ ಹೊಣೆಗಾರಿಕೆ ಎಂದು ಹೇಳಿದ್ದಾರೆ