ಬೆಂಗಳೂರು : ನಗರದಲ್ಲಿ ನಡೆದಿದ್ದ 7.11 ಕೋಟಿ ರೂ. ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂಎಸ್ ವಿರುದ್ಧ ಕ್ರಮಕೈಗೊಳ್ಳಲು ಪೊಲೀಸ್ ಇಲಾಖೆ ಆರ್ಬಿಐಗೆ ಪತ್ರ ಬರೆದಿದೆ.
ಹಾಡಹಗಲೇ ನಡೆದಿದ್ದ ಹೆಚ್ಡಿಎಫ್ಸಿ ಬ್ಯಾಂಕ್ನ ಹಣ ದರೋಡೆ ಪ್ರಕರಣದ ಬೆನ್ನಲ್ಲೇ ಎಚ್ಚೆತ್ತ ಪೊಲೀಸ್ ಇಲಾಖೆಯಿಂದ ಮಾರ್ಗಸೂಚಿಗೆ ಸಿದ್ಧತೆ ಮಾಡಿಕೊಂಡಿದೆ. ಈ ಸಂಬಂಧ ಇಲಾಖೆ ಆರ್ಬಿಐಗೆ ಪತ್ರ ಬರೆದಿದ್ದು, ದರೋಡೆ ಪ್ರಕರಣದಲ್ಲಿ ಸಿಎಂಎಸ್ ಭದ್ರತಾ ಲೋಪ ಕಂಡುಬಂದಿದ್ದು, ಸಂಸ್ಥೆಯ ವಿರುದ್ಧ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿಕೊಂಡಿದೆ.
ಈ ನಡುವೆ RBI ಮೂಲಕ ಎಟಿಎಂಗೆ ಹಣ ತುಂಬುವ ಎಲ್ಲಾ ಸಂಸ್ಥೆಗಳ ಜೊತೆಗೆ ಪೊಲೀಸ್ ಇಲಾಖೆ ಸಭೆ ನಡೆಸಲು ಕೂಡ ತಯಾರಿ ನಡೆಸಲಾಗಿದೆ. ಕಮಿಷನರೇಟ್ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಕೋ-ಆಪರೇಟಿವ್ ಬ್ಯಾಂಕ್ ಸೇರಿದಂತೆ ಎಲ್ಲಾ ಬ್ಯಾಂಕ್ಗಳ ಲಿಸ್ಟ್ ತಯಾರಿ ಮಾಡಲಾಗಿದೆ.
ಸಿಬ್ಬಂದಿ ನೇಮಕದಲ್ಲಿ ಎನ್ಒಸಿ ಪಡೆಯದಿರೋದು, ದಾಖಲೆ ಪಡೆಯದೇ ಕೆಲಸಕ್ಕೆ ಸಿಬ್ಬಂದಿ ನೇಮಕ, ಸಾಲು ಸಾಲು ಭದ್ರತಾ ಲೋಪವೆಸಗಿ ಕೆಲಸಂಸ್ಥೆಗಳ ನಿರ್ಲಕ್ಷ್ಯಕ್ಕೆ ಆರ್ಬಿಐ ಮೂಲಕವೇ ಪೊಲೀಸರು ಮಾರ್ಗಸೂಚಿ ಪ್ರಕಟಿಸಲು ನಿರ್ಧರಿಸಿದ್ದಾರೆ.
































