79ನೇ ಸ್ವಾತಂತ್ರ‍್ಯ ದಿನಾಚರಣೆ: ಕೆಂಪುಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ನರೇಂದ್ರ ಮೋದಿ

WhatsApp
Telegram
Facebook
Twitter
LinkedIn

ನವದೆಹಲಿ : ಕೆಂಪುಕೋಟೆಯಲ್ಲಿ ನಡೆದ 79ನೇ ಸ್ವಾತಂತ್ರ‍್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಧ್ವಜಾರೋಹಣ ನೆರವೇರಿಸಿದರು.

‘ನಯ ಭಾರತ’ ಈ ವರ್ಷದ ಸ್ವಾತಂತ್ರ‍್ಯ ದಿನಾಚರಣೆಯ ಘೋಷವಾಕ್ಯವಾಗಿದೆ. ಸಮೃದ್ಧ, ಸುರಕ್ಷಿತ ಮತ್ತು ದಿಟ್ಟ ನವ ಭಾರತದ ನಿರಂತರ ಉದಯವನ್ನು ಸ್ಮರಿಸುವ ಧ್ಯೇಯವಾಗಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ.

ಧ್ವಜಾರೋಹಣಕ್ಕೂ ಮುನ್ನ ದೆಹಲಿಯ ರಾಜ್‌ಘಾಟ್‌ನಲ್ಲಿ ಮಹಾತ್ಮ ಗಾಂಧಿ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಗೌರವ ಸಲ್ಲಿಸಿದ ಬಳಿಕ ಕೆಂಪು ಕೋಟೆಗೆ ಆಗಮಿಸಿದರು. ಮೋದಿ ಅವರನ್ನು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸ್ವಾಗತಿಸಿದರು. ನಂತರ ಪ್ರಧಾನಿ ನರೇಂದ್ರ ಮೋದಿ ಅವರು ಧ್ವಜಾರೋಹಣ ನೆರವೇರಿಸಿದರು.

ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಮೋದಿ ಅವರು, “ಪೆಹಲ್ಗಾಮ್‌ನಲ್ಲಿ ಭಯೋತ್ಪಾದಕ ದಾಳಿ ನಡೆಯಿತು. ಧರ್ಮ ಕೇಳಿ ಹತ್ಯೆ ಮಾಡಲಾಯಿತು. ಪತ್ನಿ ಎದುರು ಪತಿಯನ್ನು, ಮಗನ ಮುಂದೆ ತಂದೆಯನ್ನು ಹತ್ಯೆ ಮಾಡಲಾಯಿತು. ಇಡೀ ದೇಶದಲ್ಲಿ ಆಕ್ರೋಶ ಮಡುಗಟ್ಟಿತ್ತು. ಆಪರೇಷನ್ ಸಿಂಧೂರ ಈ ಆಕ್ರೋಶದ ಪ್ರತಿಬಿಂಬವಾಗಿತ್ತು. ನಾವು ನಮ್ಮ ಸೇನೆಗೆ ಪೂರ್ಣ ಸ್ವಾತಂತ್ರ‍್ಯ ನೀಡಿದೆವು. ದಾಳಿ, ಸಮಯ, ಗುರಿ ಎಲ್ಲವನ್ನು ನಿರ್ಧರಿಸಲು ಸ್ವಾತಂತ್ರ‍್ಯ ನೀಡಲಾಯಿತು. ಸೇನೆ ಹಿಂದೆ ಮಾಡದ ಸಾಹಸವನ್ನು ಮೊದಲ ಬಾರಿಗೆ ಮಾಡಿತು. ಪಾಕಿಸ್ತಾನದ ಒಳಗೆ ನುಗ್ಗಿ ದಾಳಿ ಮಾಡಿತು. ಪಾಕಿಸ್ತಾನದ ಆದ ನಷ್ಟ ಎಷ್ಟಿದೆ ಅಂದರೆ ನಿತ್ಯ ಹೊಸ ಮಾಹಿತಿ ಬರ್ತಿದೆ” ಎಂದು ತಿಳಿಸಿದ್ದಾರೆ.

“ನಮ್ಮ ದೇಶ ದಶಕಗಳಿಂದ ಭಯೋತ್ಪಾದನೆಯನ್ನು ಸಹಿಸಿಕೊಂಡಿದೆ. ಈಗ ನಾವು ಹೊಸ ನಿರ್ಧಾರ ತೆಗೆದುಕೊಂಡಿದ್ದೇವೆ. ಭಯೋತ್ಪಾದನೆ ಮತ್ತು ಅದರ ಪೋಷಕರನ್ನು ಪ್ರತ್ಯೇಕವಾಗಿ ನೋಡುವುದಿಲ್ಲ. ಅವರು ಮಾನವತವಾದದ ವಿರುದ್ಧ ವ್ಯಕ್ತಿಗಳು. ನ್ಯೂಕ್ಲಿಯರ್ ಬೆದರಿಕೆಗೆ ಭಾರತ ಬಗ್ಗುವುದಿಲ್ಲ. ಇಂತಹ ಬೆದರಿಕೆ ಬಹಳ ವರ್ಷಗಳಿಂದ ನೋಡಿದ್ದೇವೆ. ಇದು ಮುಂದೆ ನಡೆಯುವುದಿಲ್ಲ. ಇಂತಹದೇ ಘಟನೆ ಮುಂದುವರಿದರೆ ಮತ್ತೆ ನಮ್ಮ ಸೇನೆ ಪ್ರತಿಕ್ರಿಯೆ ನೀಡುವ ಕುರಿತು ನಿರ್ಧರಿಸಲಿದೆ. ನಾವು ಸರಿಯಾದ ಪ್ರತಿಕ್ರಿಯೆ ನೀಡಲಿದ್ದೇವೆ. ನೀರು ಮತ್ತು ರಕ್ತ ಒಟ್ಟಿಗೆ ಹರಿಯಲು ಸಾಧ್ಯವಿಲ್ಲ. ಸಿಂಧೂ ಜಲ ಒಪ್ಪಂದದಿಂದ ಭಾರತಕ್ಕೆ ಅನ್ಯಾಯವಾಗಿದೆ. ಭಾರತದಲ್ಲಿ ಹರಿಯುವ ನದಿ ನಮ್ಮ ಬಳಕೆಗೆ ಸಿಗುತ್ತಿಲ್ಲ. ನಮ್ಮ ಜನರು ನೀರಿದ್ದರೂ ಬಾಯಾರಿಕೊಂಡಿದ್ದಾರೆ. ಏಕಮುಖ ನ್ಯಾಯವನ್ನು ಈ ಒಪ್ಪಂದದಲ್ಲಿ ಮಾಡಿದೆ. ಭಾರತದ ನೀರಿನ ಮೇಲಿನ ಅಧಿಕಾರ ಭಾರತ ಮತ್ತು ನಮ್ಮ ರೈತರದ್ದು. ರೈತರ ಹಿತ, ರಾಷ್ಟ್ರದ ಹಿತದ ಕಾರಣ ಈ ಒಪ್ಪಂದಕ್ಕೆ ನಮ್ಮ ಒಪ್ಪಿಗೆ ಇಲ್ಲ” ಎಂದು ಹೇಳಿದರು.

“ಸ್ವಾತಂತ್ರ‍್ಯಕ್ಕಾಗಿ ಕೋಟ್ಯಂತರ ಜನರು ಯಾವುದೇ ಆಪೇಕ್ಷೆ ಇಲ್ಲದೇ ತಮ್ಮ ಜೀವನವನ್ನು ಬಲಿದಾನ ಮಾಡಿದ್ದಾರೆ. ಗುಲಾಮಿ ಸ್ಥಿತಿಯಿಂದ ಹೊರಬರಲು ಹೋರಾಟ ಮಾಡಿದರು. ಸ್ವಾತಂತ್ರ‍್ಯದ ಬಳಿಕ ಕೋಟ್ಯಂತರ ಜನರ ಹೊಟ್ಟೆ ತುಂಬಿಸುವುದು ಕಷ್ಟವಾಗಿತ್ತು. ನಮ್ಮ ರೈತರು ದೇಶದ ಜನರ ಹೊಟ್ಟೆ ತುಂಬಿಸಿದರು. ಆತ್ಮ ನಿರ್ಭರ್ ಘೋಷಣೆ ಕೇವಲ ಆರ್ಥಿಕತೆಗೆ ಸೀಮಿತವಾಗಿಲ್ಲ. ಆತ್ಮ ನಿರ್ಭರ್ ನಮ್ಮ ಸಾಮರ್ಥ್ಯದೊಂದಿಗೆ ಸಂಪರ್ಕಿಸಿದೆ. ಆತ್ಮ ನಿರ್ಭರ್ ನಮ್ಮ ಸಾಮರ್ಥ್ಯವನ್ನು ಹೆಚ್ಚಿಸುತ್ತದೆ” ಎಂದರು.

 

BC Suddi   About Us
BC Suddi Bcsuddi is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World. Read More
For Feedback - [email protected]

Related News

LATEST Post

WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

WhatsApp Icon Telegram Icon