ಬೀದರ್ : ಸೆಪ್ಟೆಂಬರ್ ತಿಂಗಳಲ್ಲಿ ಸುರಿದ ಧಾರಾಕಾರ ಮಳೆಯಿಂದಾಗಿ ರೈತರ ಬೆಳೆಗಳು, ಮನೆಗಳು, ರಸ್ತೆ ಹಾಗೂ ಜಾನುವಾರುಗಳಿಗೆ ಉಂಟಾದ ಭಾರೀ ಹಾನಿಯನ್ನು ಗಮನದಲ್ಲಿಟ್ಟುಕೊಂಡು, ಮುಖ್ಯಮಂತ್ರಿಗಳು ಘೋಷಿಸಿರುವ ಪ್ರತಿ ಹೆಕ್ಟೇರ್ಗೆ ಹೆಚ್ಚುವರಿ ₹8,500 ರೂ. ಪರಿಹಾರವನ್ನು ಒಳಗೊಂಡಂತೆ ಒಟ್ಟು ₹300 ಕೋಟಿ ರೂ. ಪರಿಹಾರ ಮೊತ್ತವನ್ನು ಅಕ್ಟೋಬರ್ 30ರೊಳಗೆ ಪಾವತಿಸಲಾಗುವುದು ಎಂದು ಇಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ವಿಪತ್ತು ನಿರ್ವಹಣಾ ಸಭೆಯಲ್ಲಿ ಸಚಿವ ಈಶ್ವರ್ ಖಂಡ್ರೆ ತಿಳಿಸಿದರು.
ಈಗಾಗಲೇ ಎನ್ಡಿಆರ್ಎಫ್ ಮತ್ತು ಎಸ್ಡಿಆರ್ಎಫ್ ನಿಯಮದಂತೆ ₹170 ಕೋಟಿ ರೂ. ಪರಿಹಾರ ಪಾವತಿಸಲಾಗುತ್ತಿದ್ದು, ಉಳಿದ ಮೊತ್ತವನ್ನು ಕೂಡ ಅಕ್ಟೋಬರ್ 30ರೊಳಗೆ ವಿತರಿಸಲಾಗುವುದು.ಮನೆ ಹಾನಿ, ಬೆಳೆ ಹಾನಿ, ಜಾನುವಾರು ಹಾನಿ ಹಾಗೂ ಜೀವ ಹಾನಿಗೆ ದೀಪಾವಳಿಯೊಳಗೆ ಪರಿಹಾರ ನೀಡಲು ತಹಶೀಲ್ದಾರರು ಹಾಗೂ ಸಂಬಂಧಿತ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.