ಮಂಗಳೂರಿನಲ್ಲಿ ನಡುರಸ್ತೆಯಲ್ಲಿಯೇ ರೌಡಿಶೀಟರ್ ಹಾಗೂ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಕೊಲೆ ಮಾಡಲಾಗಿತ್ತು. ಈ ಘಟನೆಗೆ ಸಂಬಂಧಿಸಿದಂತೆ ಇದೀಗ ಪೊಲೀಸರು ಆರೋಪಿಗಳನ್ನು ಬಂಧಿಸಿ ತನಿಖೆ ನಡೆಸುತ್ತಿದ್ದಾರೆ. ತನಿಖೆ ವೇಳೆ ಸ್ಫೋಟಕ ಅಂಶ ಒಂದು ಬಯಲಾಗಿದೆ.
ಹೌದು, ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಂದು ಟ್ವಿಸ್ಟ್ ಸಿಕ್ಕಿದೆ. ಎನ್ ಐಎ ತನಿಖೆಯ ವೇಳೆ ಹತ್ಯೆ ಆರೋಪಿಗಳಿಗೆ ನಿಷೇಧಿತ ಪಿಎಫ್ ಐ ಜೊತೆ ನಂಟಿತ್ತು ಎಂಬ ಬಗ್ಗೆ ಸಾಕ್ಷ್ಯ ಲಭ್ಯವಗಿದೆ.
ಕೇಸ್ ನಲ್ಲಿ ಬಂಧಿತರ ಬ್ಯಾಂಕ್ ಖಾತೆಗಳಿಗೆ ಹಣ ಹೋಗಿದೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಎನ್ ಐಎ ತಂಡ ಫಂಡಿಂಗ್ ಪಾಯಿಂಟ್ ತನಿಖೆಗೆ ಇಳಿದಿದೆ. ಬಂಧಿತ ಆರೋಪಿಗಳ ಬ್ಯಾಂಕ್ ಖಾತೆಗಳಿಗೆ ವಿದೇಶಿ ಫಂಡಿಂಗ್ ಬಗ್ಗೆ ಪತ್ತೆಯಾಗಿದ್ದು, 12 ಆರೋಪಿಗಳ ಬ್ಯಾಂಕ್ ಖಾತೆ ವಿವರವನ್ನು ತನಿಖಾ ತಂಡ ಸಂಗ್ರಹಿಸಿದೆ ಎಂದು ತಿಳಿದುಬಂದಿದೆ