ಕಲಬುರಗಿ: 1 ಲಕ್ಷ ಲಂಚ ಪಡೆಯು ವಾಗ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದ ತಹಶೀಲ್ದಾರ್ ಶಶಿಕಲಾ ಪಾದಗಟ್ಟಿ ಸೇರಿದಂತೆ ಇಬ್ಬರಿಗೆ ಇಲ್ಲಿನ ಜಿಲ್ಲಾ ನ್ಯಾಯಾಲಯವು ನಾಲ್ಕು ವರ್ಷ ಜೈಲು ಶಿಕ್ಷೆ ಹಾಗೂ ತಲಾ 20 ಸಾವಿರ ದಂಡ ವಿಧಿಸಿದೆ.
2017ರಲ್ಲಿ ಅಫಜಲಪುರದ ತಹಶೀಲ್ದಾರ್ ಆಗಿದ್ದ ಶಶಿಕಲಾ ಪಾದಗಟ್ಟಿ ಹಾಗೂ ದೂರುದಾರನಿಂದ ಲಂಚದ ಹಣ ಪಡೆದು ತಹಶೀಲ್ದಾರ್ಗೆ ತಲುಪಿಸಿದ್ದ ಶಿವಾನಂದ ಜಮಖಂಡಿ ಶಿಕ್ಷೆಗೆ ಗುರಿಯಾದವರು.
ಶಶಿಕಲಾ ಪ್ರಸ್ತುತ ಯಾದಗಿರಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದರು. ಕಳೆದ ವಾರವಷ್ಟೇ ರಾಜ್ಯ ಸರ್ಕಾರ ಅವರಿಗೆ ಕಡ್ಡಾಯ ನಿವೃತ್ತಿಗೆ ಸೂಚಿಸಿ, ಕೆಲಸದಿಂದ ಬಿಡುಗಡೆ ಮಾಡಿತ್ತು.
ಘಟನೆಯ ವಿವರ: ಅಫಜಲಪುರ ತಾಲ್ಲೂಕಿನ ಕರಜಗಿ ನಾಡ ಕಚೇರಿಯಲ್ಲಿ ಗುತ್ತಿಗೆ ಆಧಾರದ ಡೇಟಾ ಎಂಟ್ರಿ ಆಪರೇಟರ್ ಶಿವಲಿಂಗಯ್ಯ ಬಸಯ್ಯ ಮಠ ಅವರು ಕೆಲಸ ಮಾಡಿಕೊಡಲು ಹಣ ಪಡೆಯುತ್ತಿರುವ ಬಗ್ಗೆ ಸಾರ್ವಜನಿಕರು ತಹಶೀಲ್ದಾರ್ಗೆ ದೂರು ನೀಡಿದ್ದರು.

































