ಪೈಲಟ್ ಕಡೆಯಿಂದ ಲೋಪ ಎಂಬ ಆರೋಪ ದುರದೃಷ್ಟಕರ, ಬೇಜವಾಬ್ದಾರಿ- ಸುಪ್ರೀಂ ಆಕ್ಷೇಪ

WhatsApp
Telegram
Facebook
Twitter
LinkedIn

ನವದೆಹಲಿ : ಜೂನ್ 12 ರಂದು ಅಹಮದಾಬಾದ್‌ನಲ್ಲಿ ನಡೆದ ಏರ್ ಇಂಡಿಯಾ ವಿಮಾನ ದುರಂತದ ಕುರಿತು ವಿಮಾನ ಅಪಘಾತ ತನಿಖಾ ಬ್ಯೂರೋ ಪ್ರಾಥಮಿಕ ವರದಿ ಸಲ್ಲಿಸಿತ್ತು. ಇದೀಗ ತನಿಖಾ ಬ್ಯೂರೋ ಸಲ್ಲಿಸಿದ ಪ್ರಾಥಮಿಕ ವರದಿಯ ಕೆಲ ಅಂಶಗಳ ಬಗ್ಗೆ ಸುಪ್ರೀಂ ಕೋರ್ಟ್ ಆಕ್ಷೇಪ ವ್ಯಕ್ತಪಡಿಸಿದೆ.

ದುರಂತದ ಬಗ್ಗೆ ಸ್ವತಂತ್ರ, ನ್ಯಾಯಯುತ ಮತ್ತು ಕಾಲಮಿತಿಯಲ್ಲಿ ತನಿಖೆ ನಡೆಸುವಂತೆ ಕೋರಿ ಸಲ್ಲಿಸಲಾದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ಎನ್. ಕೋಟಿಶ್ವರ್ ಸಿಂಗ್ ಅವರಿದ್ದ ದ್ವಿಸದಸ್ಯ ಪೀಠ ಕೇಂದ್ರ ಮತ್ತು ನಾಗರಿಕ ವಿಮಾನಯಾನ ನಿರ್ದೇಶನಾಲಯಗೆ ನೋಟಿಸ್ ಜಾರಿ ಮಾಡಿದೆ. ಜುಲೈ 12 ರಂದು ಬಿಡುಗಡೆಯಾದ ಎಎಐಬಿ ಪ್ರಾಥಮಿಕ ವರದಿಯು ಪೈಲಟ್‌ಗಳ ಕಡೆಯಿಂದ ಲೋಪಗಳನ್ನು ಸೂಚಿಸಿದೆ ಎಂಬುದನ್ನು ಗಮನಿಸಿದ ದ್ವಿಸದಸ್ಯ ಪೀಠ, ಪೈಲಟ್ ಕಡೆಯಿಂದ ಲೋಪ ಎಂಬ ಆರೋಪ ದುರದೃಷ್ಟಕರ, ಬೇಜವಾಬ್ದಾರಿ ಎಂದು ಪೀಠ ಆಕ್ಷೇಪ ವ್ಯಕ್ತಪಡಿಸಿತು.

ಈ ವರದಿಯ ಉಲ್ಲೇಖಗಳನ್ನು ಪ್ರಶ್ನಿಸಿ ವಿಮಾನಯಾನ ಸುರಕ್ಷತೆ ಎನ್‌ಜಿಒ ಸೇಫ್ಟಿ ಮ್ಯಾಟರ್ಸ್ ಫೌಂಡೇಶನ್, ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು ಹೂಡಿತ್ತು. ಇಂಧನ-ಸ್ವಿಚ್ ದೋಷಗಳು ಮತ್ತು ವಿದ್ಯುತ್ ದೋಷಗಳಂತಹ ವ್ಯವಸ್ಥಿತ ವೈಪರೀತ್ಯಗಳನ್ನು ಕಡಿಮೆ ಮಾಡಿ, ಪೈಲಟ್ ದೋಷದ ನಿರೂಪಣೆ ಮಾಡಲಾಗಿದೆ ಎಂದು ಸಾರ್ವಜನಿಕ ಹಿತಾಸಕ್ತಿ ಅರ್ಜಿಯಲ್ಲಿ ಉಲ್ಲೇಖಿಸಲಾಗಿತ್ತು. ಅಂತಾರಾಷ್ಟ್ರೀಯ ಪೈಲಟ್ ಒಕ್ಕೂಟ ಕೂಡ ಪ್ರಾಥಮಿಕ ತನಿಖಾ ವರದಿಯನ್ನು ಪ್ರಶ್ನೆ ಮಾಡಿತ್ತು.

“ಅಪಘಾತ ಸಂಭವಿಸಿ 100ಕ್ಕೂ ಹೆಚ್ಚು ದಿನಗಳು ಕಳೆದಿದೆ. ಆದರೆ ಇದುವರೆಗೂ ಕೇವಲ ಪ್ರಾಥಮಿಕ ವರದಿಯನ್ನು ಮಾತ್ರ ಬಿಡುಗಡೆ ಮಾಡಲಾಗಿದೆ. ಅಲ್ಲದೇ ವರದಿಯಲ್ಲಿ ಯಾವುದೇ ಅಪಘಾತಕ್ಕೆ ನಿಖರ ಕಾರಣ ಮತ್ತು ಮುನ್ನೆಚ್ಚರಿಕಾ ಕ್ರಮಗಳ ಉಲ್ಲೇಖ ಇರದಿರುವುದರಿಂದ, ಬೋಯಿಂಗ್ ವಿಮಾನಗಳಲ್ಲಿ ಪ್ರಯಾಣಿಸುವ ಎಲ್ಲಾ ಪ್ರಯಾಣಿಕರು ಇಂದು ಅಪಾಯದಲ್ಲಿದ್ದಾರೆ” ಎಂದು ಅರ್ಜಿದಾರರ ಪರ ಹಿರಿಯ ವಕೀಲ ಪ್ರಶಾಂತ್ ಭೂಷಣ್ ವಾದ ಮಂಡಿಸಿದ್ದಾರೆ.

ಅಪಘಾತದ ತನಿಖೆಗಾಗಿ ರಚಿಸಲಾದ ಐವರು ಸದಸ್ಯರ ತಂಡವು, ವಾಯುಯಾನ ನಿಯಂತ್ರಕ ಡಿಜಿಸಿಎಯ ಮೂವರು ಸದಸ್ಯರನ್ನು ಹೊಂದಿದ್ದು, ಗಂಭೀರ ಹಿತಾಸಕ್ತಿ ಸಂಘರ್ಷವನ್ನು ಸೃಷ್ಟಿಸುತ್ತದೆ. ಅಪಘಾತಕ್ಕೆ ಯಾವ ಸಂಸ್ಥೆಯನ್ನು ಪ್ರಶ್ನಿಸಲಾಗುತ್ತಿದೆಯೋ ಅದೇ ಸಂಸ್ಥೆಯ ಸದಸ್ಯರು ಹೇಗೆ ತನಿಖೆ ನಡೆಸಲು ಸಾಧ್ಯ? ಅಪಘಾತದ ನಿಜವಾದ ಕಾರಣ ಸ್ಪಷ್ಟಪಡಿಸಲು ಡಿಜಿಟಲ್ ಫ್ಲೈಟ್ ಡೇಟಾ ರೆಕಾರ್ಡರ್ ನಿಂದ ಡೇಟಾವನ್ನು ಪಡೆಯುವಂತೆ ವಕೀಲರು ಕೋರಿದರು.

ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿ ಎನ್. ಕೋಟೀಶ್ವರ್ ಸಿಂಗ್ ಅವರ ಪೀಠವು, ಪ್ರಾಥಮಿಕ ತನಿಖೆಯ ಎಲ್ಲಾ ವರದಿಗಳನ್ನು ಸಾರ್ವಜನಿಕಗೊಳಿಸಿವುರಿಂದ ತನಿಖೆಯ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. ಆದ್ರೆ ಅಪಘಾತಕ್ಕೆ ಪೈಲಟ್ ದೋಷ ಎಂಬ ಆರೋಪ ದುರದೃಷ್ಟಕರ ಎಂದು ಎಂದು ಅಭಿಪ್ರಾಯಪಟ್ಟಿತು.

BC Suddi   About Us
BC Suddi Bcsuddi is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World. Read More
For Feedback - [email protected]

Related News

LATEST Post

WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

WhatsApp Icon Telegram Icon