ಬೆಂಗಳೂರು : ಪೋಕ್ಸೋ ಪ್ರಕರಣದ ಸಂಬಂಧ ಮಾರ್ಚ್ 15 ರಂದು ಖುದ್ದು ವಿಚಾರಣೆಗೆ ಹಾಜರಾಗುವಂತೆ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂಪ್ಪರಿಗೆ 1ನೇ ತ್ವರಿತಗತಿ ನ್ಯಾಯಾಲಯ ಜಾರಿ ಮಾಡಿದ್ದ ಸಮನ್ಸ್ಗೆ ಹೈಕೋರ್ಟ್ ತಡೆ ನೀಡಿದೆ.
ಯಡಿಯೂರಪ್ಪ ಖುದ್ದು ಹಾಜರಾತಿಗೂ ವಿನಾಯಿತಿ ನೀಡಿದೆ. ಈ ಮೂಲಕ ಬಿಎಸ್ ಯಡಿಯೂಪ್ಪ ಅವರಿಗೆ ರಿಲೀಫ್ ಸಿಕ್ಕಿದೆ.
ವಿಚಾರಣೆ ವೇಳೆ ಹೈಕೋರ್ಟ್ ಮಧ್ಯಂತರ ರಿಲೀಫ್ ನೀಡಿತ್ತು. ಖುದ್ದು ಹಾಜರಾತಿಯಿಂದಲೂ ಹೈಕೋರ್ಟ್ ವಿನಾಯಿತಿ ನೀಡಿತ್ತು. 2024ರ ಫೆಬ್ರವರಿ 2ರಂದು ಅನುಚಿತವಾಗಿ ಸ್ಪರ್ಶಿಸಿದ ಆರೋಪವಿದೆ. ಒಂದು ತಿಂಗಳ ಬಳಿಕ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ. ಸ್ಥಳದಲ್ಲಿದ್ದ ಸಾಕ್ಷಿಗಳು ಆ ರೀತಿಯ ಘಟನೆ ನಡೆದಿಲ್ಲವೆಂದಿದ್ದಾರೆ. ಬಾಲಕಿ, ಆಕೆಯ ತಾಯಿಯ ಹೇಳಿಕೆ ಮೇಲೆ ಆರೋಪಪಟ್ಟಿ ದಾಖಲಿಸಿದ್ದಾರೆ. ತಾಯಿಯ ಮೊಬೈಲ್ನಲ್ಲಿದ್ದ ಸಂಭಾಷಣೆ ಬಿಎಸ್ ಯಡಿಯೂರಪ್ಪ ಅಳಿಸಿಲ್ಲ. ಪೊಲೀಸರು ಹಾಕಿರುವ ಐಟಿ ಸೆಕ್ಷನ್ ದೂರುದಾರರಿಗೆ ಅನ್ವಯವಾಗುತ್ತದೆ ಎಂದು ವಾದಿಸಿದರು.
1 ತಿಂಗಳು 12 ದಿನ ತಡವಾಗಿ ಪೊಕ್ಸೋ ಕೇಸ್ ದಾಖಲಿಸಲಾಗಿದೆ. ಘಟನೆ ನಡೆದಿದ್ದರೆ ಯಾರೂ ಇಷ್ಟು ತಡವಾಗಿ ದೂರು ದಾಖಲಿಸುತ್ತಿರಲಿಲ್ಲ. ಸಮನ್ಸ್ ರದ್ದುಪಡಿಸಿ ಹೊಸದಾಗಿ ಪರಿಶೀಲನೆಗೆ ಹಿಂದೆ ಆದೇಶಿಸಲಾಗಿತ್ತು.