ಅಗ್ನಿ ಅವಘಡದ ವೇಳೆ ಮಕ್ಕಳನ್ನ ರಕ್ಷಿಸಿದ ನಾಲ್ವರು ಭಾರತೀಯರಿಗೆ ಸಿಂಗಾಪುರ ಸರ್ಕಾರದ ಗೌರವ

WhatsApp
Telegram
Facebook
Twitter
LinkedIn

ಸಿಂಗಾಪುರ : ಕಟ್ಟಡವೊಂದರಲ್ಲಿ ಅಗ್ನಿ ಅವಘಡ ಸಂಭವಿಸಿ, ಒಳಗೆ ಸಿಲುಕಿದ್ದವರ ರಕ್ಷಣೆಗೆ ನೆರವಾಗಿದ್ದ ನಾಲ್ವರು ಭಾರತೀಯರನ್ನು ಸಿಂಗಾಪುರ ಸರ್ಕಾರ ಗೌರವಿಸಿದೆ.

ಕೇಂದ್ರ ಸಿಂಗಾಪುರದಲ್ಲಿರುವ ಕಟ್ಟಡದಲ್ಲಿರುವ ಅಡುಗೆ ಕಲಿಸುವ ಶಾಲೆಯಲ್ಲಿ ಏಪ್ರಿಲ್ 8ರಂದು ಈ ಅಗ್ನಿ ಅವಘಡ ಸಂಭವಿಸಿತ್ತು. ಈ ವೇಳೆ ಕಟ್ಟಡದ ಒಳಗೆ 16 ಮಕ್ಕಳು ಹಾಗೂ ನಾಲ್ವರು ಯುವಕರು ಸಿಲುಕಿಕೊಂಡಿದ್ದರು. ಮಕ್ಕಳ ಚೀರಾಟ ಹಾಗೂ ಕಟ್ಟಡದ ಮೂರನೇ ಮಹಡಿಯಲ್ಲಿ ದಟ್ಟ ಹೊಗೆ ಆವರಿಸಿರುವುದನ್ನು ಗಮನಿಸಿದ ಭಾರತ ಮೂಲದ ನಾಲ್ವರು ವಲಸೆ ಕಾರ್ಮಿಕರು ತಕ್ಷಣವೇ ಸ್ಥಳಕ್ಕೆ ಧಾವಿಸಿ 10 ಮಕ್ಕಳನ್ನು ರಕ್ಷಿಸಿದ್ದರು.

ಸಿಂಗಾಪುರ ನಾಗರಿಕ ರಕ್ಷಣಾ ಪಡೆ (ಎಸ್‌ಸಿಡಿಎಫ್) ಸಿಬ್ಬಂದಿ ಸ್ಥಳಕ್ಕೆ ಬರುವ ಮುನ್ನ ಇಂದ್ರಜಿತ್ ಸಿಂಗ್, ಸುಬ್ರಮಣಿಯನ್ ಶರಣ್‌ರಾಜ್, ನಾಗರಾಜನ್ ಅಂಬರಾಸನ್ ಮತ್ತು ಶಿವಾಮಿ ವಿಜಯರಾಜ್ ಅವರು 10 ಮಕ್ಕಳನ್ನು ಕಾಪಾಡಿದ್ದರು. ಹೀಗಾಗಿ ಈ ನಾಲ್ವರು ವಲಸೆ ಕಾರ್ಮಿಕಕರ ಯೋಗಕ್ಷೇಮ ಕಾಪಾಡುವ ನಿಟ್ಟಿನಲ್ಲಿ ಕೆಲಸ ಮಾಡುವ ಮಾನವಸಂಪನ್ಮೂಲ ಸಚಿವಾಲಯದ ‘ಭರವಸೆ, ರಕ್ಷಣೆ ಮತ್ತು ಒಪ್ಪಂದ’ (ಎಸಿಇ) ಗುಂಪು, ‘ಫ್ರೆಂಡ್ಸ್ ಆಫ್ ಎಸಿಇ’ ನಾಣ್ಯಗಳನ್ನು ನೀಡಿ ಗೌರವಿಸಿದೆ

BC Suddi   About Us
BC Suddi Bcsuddi is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World. Read More
For Feedback - [email protected]

Related News

LATEST Post

WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

WhatsApp Icon Telegram Icon