Bcsuddi Kannada News
www.bcsuddi.com is an Kannada web portal founded by Basavaraju C. The website provides news updates, karnataka, india, world, sports, entertainment, film news in Kannada

[vc_row][vc_column]

BREAKING NEWS

[/vc_column][/vc_row]

ನಿಂತಿದ್ದ ಲಾರಿಗೆ ಆ್ಯಂಬುಲೆನ್ಸ್ ಡಿಕ್ಕಿ ಸ್ಥಳದಲ್ಲಿ ಮೂವರ ಸಾವು.!

0

 

ಚಿತ್ರದುರ್ಗ : ನಿಂತಿದ್ದ ಲಾರಿಗೆ ಆ್ಯಂಬುಲೆನ್ಸ್ ಡಿಕ್ಕಿಯಾಗಿ, ಆ್ಯಂಬುಲೆನ್ಸ್ ಚಾಲಕ ಸೇರಿದಂತೆ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ತಾಲೂಕಿನ ಮಲ್ಲಾಪುರ ಬಳಿ ನಡೆದಿದೆ.

ಮಲ್ಲಾಪುರದ ಬಳಿ ನಿಂತಿದ್ದ ಲಾರಿಗೆ ಆ್ಯಂಬುಲೆನ್ಸ್ ಡಿಕ್ಕಿ ಹೊಡೆದ ಪರಿಣಾಮ ಆ್ಯಂಬುಲೆನ್ಸ್ ನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಆ್ಯಂಬುಲೆನ್ಸ್ ನಲ್ಲಿದ್ದ  ಕನಕಮಣಿ (72) ಆಕಾಶ್  (17 ಮತ್ತು  ಚಾಲಕ ಮೃತಪಟ್ಟಿದ್ದಾರೆ. ಮತ್ತಿಬ್ಬರು ಗಾಯಗೊಂಡಿದ್ದು,  ಗಾಯಗೊಂಡವರನ್ನು ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ  ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಗುಜರಾತ್ ನಿಂದ ತಮಿಳುನಾಡಿಗೆ ಹೋಗುತ್ತಿದ್ದ ಆ್ಯಂಬುಲೆನ್ಸ್ ಚಿತ್ರದುರ್ಗದ ಮಲ್ಲಾಪುರ ಬಳಿ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ. ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave A Reply

Your email address will not be published.