ಶ್ರೀನಗರ : ಆಪರೇಷನ್ ಮಹಾದೇವ್ ಅಡಿಯಲ್ಲಿ ಭಾರತೀಯ ಸೇನೆಯು ಪಹಲ್ಗಾಮ್ ದಾಳಿಕೋರರಲ್ಲಿ ಮೂವರನ್ನು ಶ್ರೀನಗರದಲ್ಲಿ ಹತ್ಯೆ ಮಾಡಿದೆ ಎಂದು ಹೇಳಲಾಗುತ್ತಿದೆ.
ಪಹಲ್ಗಾಮ್ ದಾಳಿಯಲ್ಲಿ ಭಾಗಿಯಾಗಿದ್ದ ಭಯೋತ್ಪಾದಕರನ್ನು ಸುತ್ತುವರೆದಿದ್ದ ಸೇನೆಯು ಮೂವರು ಭಯೋತ್ಪಾದಕರನ್ನು ಹತ್ಯೆಮಾಡಿದೆ. ಭಯೋತ್ಪಾದಕರನ್ನು ಬೇರು ಸಹಿತ ನಿರ್ಮೂಲನೆ ಮಾಡಲು ಆಪರೇಷನ್ ಮಹಾದೇವ್ ಆರಂಭಿಸಿರುವ ಭದ್ರತಾ ಪಡೆಗಳು ಉಗ್ರರನ್ನು ಸದೆಬಡಿಯುತ್ತಿದೆ.
ಪಹಲ್ಗಾಮ್ನಲ್ಲಿ ಅಮಾಯಕ ಪ್ರವಾಸಿಗರನ್ನು ಹತ್ಯೆ ಮಾಡಿದ ಮೂವರು ಭಯೋತ್ಪಾದಕರನ್ನು ಭಾರತೀಯ ಪಡೆಗಳು ಸದೆಬಡಿದಿದೆ. ಸೇನೆ, ಸಿಆರ್ಪಿಎಫ್ ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಈ ಎನ್ಕೌಂಟರ್ನಲ್ಲಿ ಭಯೋತ್ಪಾದಕರಾದ ಆಸಿಫ್ ಫೌಜಿ, ಸುಲೇಮಾನ್ ಶಾ ಮತ್ತು ಅಬು ತಲ್ಹಾ ಸಾವನ್ನಪ್ಪಿದ್ದಾರೆ. ಸೇನಾ ಪಡೆಗಳು ಮತ್ತು ಭಯೋತ್ಪಾದಕರ ನಡುವಿನ ಗುಂಡಿನ ಚಕಮಕಿ ಇನ್ನೂ ಮುಂದುವರೆದಿದೆ ಎನ್ನಲಾಗಿದೆ.
ಪಹಲ್ಗಾಮ್ ಘಟನೆಯ ನಂತರ, ಸೇನೆಯು ಆಸಿಫ್ ಫೌಜಿ, ಸುಲೇಮಾನ್ ಶಾ ಮತ್ತು ಅಬು ತಲ್ಹಾ ಅವರ ಸುಳಿವು ನೀಡಿದವರಿಗೆ ತಲಾ 20 ಲಕ್ಷ ರೂ. ಬಹುಮಾನವನ್ನು ಘೋಷಿಸಿತ್ತು.