ನಿತ್ಯ ನಿಮ್ಮ ಬಿಸಿ ಸುದ್ದಿಯಲ್ಲಿ 12 ನೇ ಶತಮಾನದಲ್ಲಿ ಶರಣರು ರಚಿಸಿದ ವಚನಗಳನ್ನು ನಿಮ್ಮಗಳ ಅವಗಾಹನೆಗೆ
ವಚನ:
ಬಂದುದ ಕೈಕೊಳ್ಳಬಲ್ಲಡೆ ನೇಮ,
ಇದ್ದುದ ವಂಚನೆಯ ಮಾಡದಿದ್ದಡೆ ನೇಮ.
ನಡೆದು ತಪ್ಪದಿದ್ದಡೆ ಅದು ನೇಮ,
ನುಡಿದು ಹುಸಿಯದಿದ್ದಡೆ ಅದು ಮುನ್ನವೆ ನೇಮ.
ನಮ್ಮ ಕೂಡಲಸಂಗನ ಶರಣರು ಬಂದಡೆ
ಒಡೆಯರಿಗೊಡವೆಯನೊಪ್ಪಿಸುವುದೆ ನೇಮ.
-ಬಸವಣ್ಣ
































