ನಿತ್ಯ ನಿಮ್ಮ ಬಿಸಿ ಸುದ್ದಿಯಲ್ಲಿ 12 ನೇ ಶತಮಾನದಲ್ಲಿ ಶರಣರು ರಚಿಸಿದ ವಚನಗಳನ್ನು ನಿಮ್ಮಗಳ ಅವಗಾಹನೆಗೆ
ವಚನ:
ಕೇಳಿರೆ ಕೇಳಿರೆ ಶಿವವಚನ, ಗುರುವಚನ.
ಪುರಾತರ ವಚನಾನುಭವ ಕೇಳಿ ಬದುಕಿರಯ್ಯಾ.
ಕೇಳಿದ ಸದ್ಭಕ್ತರೆಲ್ಲರು ಕೃತಾರ್ಥರಪ್ಪರು.
ತನು ಕರಗಿ, ಮನ ಕೊರಗಿ, ಭಾವ ಬೆಚ್ಚದೊ !
ಅಹಂಕಾರವಳಿದು, ಶರಣರ ಅನುಭಾವವ ಕೇಳಿದಡೆ,
ಅದೇ ಮುಕ್ತಿ ನೋಡಿರೆ,
ಇಂತಲ್ಲದೆ ಮನೋವ್ಯಾಕುಲನಾಗಿ, ತನುಮುಟ್ಟಿ ಕೇಳಿದಡೆ,
ಉಪದೇಶವೆಂತು ಸಲುವುದಯ್ಯಾ ?
ಎಂತಳವಡುವುದಯ್ಯಾ ?
ಮಹಾಲಿಂಗ ಕಲ್ಲೇಶ್ವರಾ, ಗುರುವಚನ ಪರಾಙ್ಮುಖಂಗೆ
ಎಂದೆಂದೂ ಭವ ಹಿಂಗದು ನೋಡಾ.
-ಹಾವಿನಹಾಳ ಕಲ್ಲಯ್ಯ

































