ನಿತ್ಯ ನಿಮ್ಮ ಬಿಸಿ ಸುದ್ದಿಯಲ್ಲಿ 12 ನೇ ಶತಮಾನದಲ್ಲಿ ಶರಣರು ರಚಿಸಿದ ವಚನಗಳನ್ನು ನಿಮ್ಮಗಳ ಅವಗಾಹನೆಗೆ
ವಚನ:
ನೆನಹು ಸತ್ತಿತ್ತು ಭ್ರಾಂತು ಬೆಂದಿತ್ತು.
ಅರಿವು ಮರೆಯಿತ್ತು ಕುರುಹುಗೆಟ್ಟಿತ್ತು.
ಗತಿಯನರಸಲುಂಟೆ? ಮತಿಯನರಸಲುಂಟೆ?
ಅಂಗವೆಲ್ಲ ನಷ್ಟವಾಗಿ ಲಿಂಗಲೀಯವಾಯಿತ್ತು.
ಕಂಗಳಂಗದ ಕಳೆಯ ಬೆಳಗಿನ ಭಂಗ ಹಿಂಗಿತ್ತು ಗುಹೇಶ್ವರಾ.
-ಅಲ್ಲಮಪ್ರಭುದೇವರು
































