ನಿತ್ಯ ನಿಮ್ಮ ಬಿಸಿ ಸುದ್ದಿಯಲ್ಲಿ 12 ನೇ ಶತಮಾನದಲ್ಲಿ ಶರಣರು ರಚಿಸಿದ ವಚನಗಳನ್ನು ನಿಮ್ಮಗಳ ಅವಗಾಹನೆಗೆ
ವಚನ:
ನರೆ ಕೆನ್ನೆಗೆ, ತೆರೆ ಗಲ್ಲಕೆ, ಶರೀರ ಗೂಡುವೋಗದ ಮುನ್ನ,
ಹಲ್ಲು ಹೋಗಿ, ಬೆನ್ನು ಬಾಗಿ, ಅನ್ಯರಿಗೆ ಹಂಗಾಗದ ಮುನ್ನ,
ಕಾಲಮೇಲೆ ಕೈಯನೂರಿ ಕೋಲ ಹಿಡಿಯದ ಮುನ್ನ,
ಮುಪ್ಪಿಂದೊಪ್ಪವಳಿಯದ ಮುನ್ನ,
ಮೃತ್ಯು ಮುಟ್ಟದ ಮುನ್ನ
ಪೂಜಿಸು ಕೂಡಲಸಂಗಮದೇವನ
-ಬಸವಣ್ಣ

































