ನಿತ್ಯ ನಿಮ್ಮ ಬಿಸಿ ಸುದ್ದಿಯಲ್ಲಿ 12 ನೇ ಶತಮಾನದಲ್ಲಿ ಶರಣರು ರಚಿಸಿದ ವಚನಗಳನ್ನು ನಿಮ್ಮಗಳ ಅವಗಾಹನೆಗೆ
ವಚನ:
ಮಾತ ಕಲಿತು ಮಂಡೆಯ ಬೋಳಿಸಿಕೊಂಡಡೇನು ?
ವೇಷಲಾಂಛನಧಾರಿ, ಉದರಪೋಷಕರಪ್ಪರಲ್ಲದೆ
ಆಗಮಾಚಾರಿಯರಾಗಲರಿಯರು ಕಾಣಿರೇ.
ಅಷ್ಟವಿಧಾರ್ಚನೆ ಷೋಡಶೋಪಚಾರಕ್ಕೆ ಸಲ್ಲದು ಸೀಮೆಯ ಕಲ್ಲು.
ಅನ್ಯರ ಬೋಸರಿಸಿ ತನ್ನ ಉದರವ ಹೊರೆವ ವೇಷಡಂಭಕರ ಮೆಚ್ಚ
ನಮ್ಮ ಕೂಡಲಚೆನ್ನಸಂಗಮದೇವ.
-ಚೆನ್ನಬಸವಣ್ಣ































