ನಿತ್ಯ ನಿಮ್ಮ ಬಿಸಿ ಸುದ್ದಿಯಲ್ಲಿ 12 ನೇ ಶತಮಾನದಲ್ಲಿ ಶರಣರು ರಚಿಸಿದ ವಚನಗಳನ್ನು ನಿಮ್ಮಗಳ ಅವಗಾಹನೆಗೆ
ವಚನ:
ತನು ಕೊಟ್ಟ ಬಳಿಕ ದೇಹವೆಲ್ಲಿಹದೊ?
ಧನ ಕೊಟ್ಟ ಬಳಿಕ ಭೋಗಂಗಲೆಲ್ಲಿಹವೊ?
ಇವೆಲ್ಲ ಬರಿಯ ಭ್ರಮೆ!
ಕೊಟ್ಟೆವೆಂಬವರ ಮುಖವ ನೋಡಲಾಗದು.
ಕೊಟ್ಟು ಭಕ್ತನಾದೆನೆಂಬ ನುಡಿ ಸಮನಿಸದಯ್ಯಾ ಗುರುವೆ,
ನಿಮ್ಮ ಶರಣರ ಬುದ್ಧಿಗೆ ಕಪಿಲಸಿದ್ಧಮಲ್ಲಿಕಾರ್ಜುನಾ.
-ಸಿದ್ಧರಾಮೇಶ್ವರ































