ನಿತ್ಯ ನಿಮ್ಮ ಬಿಸಿ ಸುದ್ದಿಯಲ್ಲಿ 12 ನೇ ಶತಮಾನದಲ್ಲಿ ಶರಣರು ರಚಿಸಿದ ವಚನಗಳನ್ನು ನಿಮ್ಮಗಳ ಅವಗಾಹನೆಗೆ
ವಚನ:
ಭಕ್ತನೊಂದು ಕುಲ, ಭವಿಯೊಂದು ಕುಲವೆಂಬರು.
ಭಕ್ತನೆಂತಿಪ್ಪ ಭವಿಯೆಂತಿಪ್ಪನೆಂದರೆ, ಆರೂ ಅರಿಯರು.
ಇದು ಬಲ್ಲವರು ತಿಳಿದು ನೋಡಿ.
ಭಕ್ತನೆಂದರೆ ಅಂಗ, ಭವಿ ಎಂದರೆ ಲಿಂಗ,
ಈ ಎರಡರ ಸಕೀಲಸಂಬಂಧವನರಿದರೆ,ಆತನೆ ನಮ್ಮ ಬಸವಪ್ರಿಯ ಕೂಡಲಚೆನ್ನಬಸವಣ್ಣ.
-ಹಡಪದ ಅಪ್ಪಣ್ಣ

































