ಪಡಿತರ ಚೀಟಿಗೆ ಇ-ಕೆವೈಸಿ ಮಾಡಿಸಲು  ಆ.31 ಅಂತಿಮ ದಿನಾಂಕ.!

 

ಚಿತ್ರದುರ್ಗ: ಪಡಿತರ ಚೀಟಿದಾರರ ಇ-ಕೆವೈಸಿ ಸಂಗ್ರಹಣೆ ಮಾಡಿಸಲು ಆಗಸ್ಟ್ 31 ಅಂತಿಮ ಗಡುವು ನಿಗದಿಪಡಿಸಿದ್ದು, ಇ-ಕೆವೈಸಿ ಸಂಗ್ರಹಣೆಯಾಗಿಲ್ಲದ ಪಡಿತರ ಚೀಟಿದಾರರು ತಪ್ಪದೇ ಇ-ಕೆವೈಸಿ ಮಾಡಿಸಿಕೊಳ್ಳಬೇಕು ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.

ಪಡಿತರ ಚೀಟಿದಾರರ ಇ.ಕೆ.ವೈ.ಸಿ ಸಂಗ್ರಹಣೆಯನ್ನು 2017ರಿಂದ ನ್ಯಾಯಬೆಲೆ ಅಂಗಡಿಗಳ ಮೂಲಕ ಸಂಗ್ರಹಣೆ ಮಾಡಲಾಗುತ್ತಿದೆ. ಚಿತ್ರದುರ್ಗ ಜಿಲ್ಲೆಯ ಇ-ಕೆ.ವೈ.ಸಿ ಸಂಗ್ರಹಣೆಯ ಪ್ರಗತಿಯನ್ನು ಪರಾಮರ್ಶೆ ಮಾಡಲಾಗಿ, ಇದುವರೆಗೂ ಜಿಲ್ಲೆಯಲ್ಲಿ ಅಂತ್ಯೋದಯ ಪಡಿತರ ಚೀಟಿ ಸದಸ್ಯರ ಶೇ.96.34 ಮತ್ತು ಆದ್ಯತಾ ಪಡಿತರ ಚೀಟಿ ಸದಸ್ಯರ ಶೇ.97.18 ಸೇರಿದಂತೆ ಒಟ್ಟು ಶೇ.97.07ರಷ್ಟು ಇ-ಕೆ.ವೈ.ಸಿ ಸಂಗ್ರಹಣೆ ಮಾಡಲಾಗಿದೆ.

Advertisement

ಪಡಿತರ ಚೀಟಿಯಲ್ಲಿನ ಸದಸ್ಯರ ಇ-ಕೆ.ವೈ.ಸಿ ಸಂಗ್ರಹಣೆಯಾಗದೇ ಇದ್ದಲ್ಲಿ ಮುಂಬರುವ ದಿನಗಳಲ್ಲಿ ಅಂತಹ ಪಡಿತರ ಚೀಟಿಗಳು, ಸದಸ್ಯರುಗಳ ಹೆಸರುಗಳು ಪಡಿತರ ಚೀಟಿಗಳಿಂದ ಬಿಟ್ಟು ಹೋಗುವ ಮತ್ತು ಆಹಾರಧಾನ್ಯ ಹಂಚಿಕೆ ಸ್ಥಗಿತಗೊಳ್ಳುವ ಸಂಭವವಿರುತ್ತದೆ. ಆದ್ದರಿಂದ ಇ-ಕೆ.ವೈ.ಸಿ ಸಂಗ್ರಹಣೆಯಾಗಿಲ್ಲದ್ದ ಪಡಿತರ ಚೀಟಿದಾರರು, ಸದಸ್ಯರು ಇದೇ ಆಗಸ್ಟ್ 31ರೊಳಗೆ ತಾವು ರಾಜ್ಯದ, ಜಿಲ್ಲೆಯ, ತಾಲ್ಲೂಕಿನ, ಹಳ್ಳಿಯ, ತಾವು ಇರುವ ಸ್ಥಳದಲ್ಲಿಯೇ ಯಾವುದೇ ನ್ಯಾಯಬೆಲೆ ಅಂಗಡಿಯಲ್ಲಿ ತಮ್ಮ ಜೀವಮಾಪನ ನೀಡಿ ಇ-ಕೆ.ವೈ.ಸಿ ಸಂಗ್ರಹಿಸಿಕೊಳ್ಳಲು ಪಡಿತರ ಚೀಟಿದಾರರಿಗೆ ಅಂತಿಮ ಗಡುವು ನೀಡಿದ್ದು, ತಪ್ಪದೇ ಇ.ಕೆ.ವೈ.ಸಿ ಮಾಡಿಸಬೇಕು ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement