ಬಳ್ಳಾರಿ: BJP ಸಂಸದ ದೇವೇಂದ್ರಪ್ಪ ಪುತ್ರ ರಂಗನಾಥ್ ವಿರುದ್ಧ ಆರೋಪ.! ಪ್ರತಿದೂರು.!

 

ಬಳ್ಳಾರಿ: ಬಳ್ಳಾರಿಯ BJP ಸಂಸದ ದೇವೇಂದ್ರಪ್ಪ ಪುತ್ರ ರಂಗನಾಥ್ ವಿರುದ್ಧ ಗಂಭೀರ ಆರೋಪ ಕೇಳಿ ಬಂದಿದೆ. ಮದುವೆ ಆಗುವುದಾಗಿ ನಂಬಿಸಿ ಲೈಂಗಿಕವಾಗಿ ಬಳಸಿಕೊಂಡಿರುವ ಅವರು ಪ್ರೀತಿಯ ನಾಟಕವಾಡಿ ಮೋಸ ಮಾಡಿದ್ದಾರೆ ಎಂದು ಬೆಂಗಳೂರು ಮೂಲದ ಯುವತಿ ಆರೋಪಿಸಿದ್ದು, ಬೆಂಗಳೂರಿನ ಬಸವನಗುಡಿ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಸುಮಾರು ಒಂದೂವರೆ ವರ್ಷದ ಹಿಂದೆ ಸಂತ್ರಸ್ತೆಗೆ ಸ್ನೇಹಿತರ ಮೂಲಕ ಪಾರ್ಟಿಯೊಂದರಲ್ಲಿ ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಉಪನ್ಯಾಸಕರಾಗಿರುವ ರಂಗನಾಥ್ ಪರಿಚಯವಾಗಿತ್ತು.

Advertisement

ಯುವತಿ ವಿರುದ್ಧ ಸಂಸದರ ಪುತ್ರನಿಂದ ಪ್ರತಿದೂರು

ಬಳ್ಳಾರಿ ಬಿಜೆಪಿ ಸಂಸದ ದೇವೇಂದ್ರಪ್ಪ ಅವರ ಪುತ್ರ, ಉಪನ್ಯಾಸಕ ರಂಗನಾಥ್ ಮದುವೆಯಾಗುವುದಾಗಿ ನಂಬಿಸಿ ವಂಚಿಸಿದ್ದಾರೆಂದು ಆರೋಪಿಸಿ ಬೆಂಗಳೂರಿನ ಬಸವನಗುಡಿ ಪೊಲೀಸರಿಗೆ ಯುವತಿ ದೂರು ನೀಡಿದ್ದಳು. ಈ ಬೆನ್ನಲ್ಲೇ ರಂಗನಾಥ್ ಕೂಡ ಮೈಸೂರಿನ ವಿಜಯನಗರ ಠಾಣೆಯಲ್ಲಿ ಪ್ರತಿದೂರು ದಾಖಲಿಸಿದ್ದಾರೆ. ಆಡಿಯೋ ಸಂಭಾಷಣೆ ಇಟ್ಟುಕೊಂಡು ಯುವತಿ 15 ಲಕ್ಷ ರೂ. ನೀಡುವಂತೆ ಬ್ಲ್ಯಾಕ್ ಮೇಲ್ ಮಾಡುತ್ತಿದ್ದಾಳೆಂದು ಆರೋಪಿಸಿದ್ದಾರೆ. ಈ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement