ಮಳೆಯ ಅಬ್ಬರ ಈ  ತಾಲೂಕುಗಳ ಶಾಲೆಗಳಿಗೆ ರಜೆ ಘೋಷಣೆ.!

 

ಬೆಂಗಳೂರು : ಮಳೆ ಅಬ್ಬರದಿಂದ ಭಾರಿ ಆವಾಂತರಗಳು ಸೃಷ್ಟಿಯಾಗುತ್ತಿವೆ ಈ ಹಿನ್ನಲೆಯಲ್ಲಿ ಇಂದು ಆರು ಜಿಲ್ಲೆಗಳಲ್ಲಿನ ಹಲವು ತಾಲೂಕಿನ ಶಾಲಾ ಮತ್ತು ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಹಾಸನ, ಸಕಲೇಶಪುರ, ಆಲೂರು, ಬೇಲೂರು, ಅರಕಲಗೂಡು, ಹೊಳೆನರಸೀಪುರದಲ್ಲಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.ಅಲ್ಲದೆ ಬೆಳಗಾವಿ ಜಿಲ್ಲೆಯಾದ್ಯಂತ ಶಾಲೆಗಳಿಗೆ ರಜೆ ಘೋಷಿಸಲಾಗಿದ್ದು,  ಹಾವೇರಿ ಜಿಲ್ಲೆಯಲ್ಲಿ ಇಂದು ಮತ್ತು ನಾಳೆ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

Advertisement

ಇನ್ನು ಉತ್ತರ ಕನ್ನಡದ 6 ತಾಲೂಕುಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದ್ದು ಉತ್ತರ ಕನ್ನಡದ ಕಾರವಾರ, ಅಂಕೋಲ, ಕುಮಟಾ, ಹೊನ್ನಾವರ, ಭಟ್ಕಳ, ದಾಂಡೇಲಿ, ಜೋಡಿಯ, ಹಳಿಯಾಳ, ಯಲ್ಲಾಪುರದಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.ಚಿಕ್ಕಮಗಳೂರಲ್ಲಿ 6 ತಾಲೂಕುಗಳಲ್ಲಿ ಶಾಲೆಗಳಿಗೆ ರಜೆ ಘೋಷಿಸಲಾಗಿದ್ದು ಚಿಕ್ಕಮಗಳೂರು, ಮೂಡಿಗೆರೆ, ಕಳಸ, ಶೃಂಗೇರಿ, ಕೊಪ್ಪ, ಎನ್ ಆರ್ ಪುರದಲ್ಲಿ ಪ್ರಾಥಮಿಕ ಮತ್ತು ಹೈಸ್ಕೂಲ್ ಗಳಿಗೆ ರಜೆ ಘೋಷಿಸಲಾಗಿದೆ

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement